ಪತ್ರಕರ್ತರ ಮೇಲೆ ದಾಳಿ ಮಾಡಿದವರನ್ನು ಬಂಧಿಸಿ: ಚಂದ್ರಬಾಬು ನಾಯ್ಡು

Prasthutha|

ಅಮರಾವತಿ: ಇತ್ತೀಚೆಗೆ ಕೆಲವು ಪತ್ರಕರ್ತರು ಮತ್ತು ಪತ್ರಿಕೆ ಕಚೇರಿ ಮೇಲೆ ದಾಳಿ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕ ಕೆ.ವಿ ರಾಜೇಂದ್ರನಾಥ ರೆಡ್ಡಿ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ವರಿಷ್ಠ ಎನ್. ಚಂದ್ರಬಾಬು ನಾಯ್ಡು ಪತ್ರ ಬರೆದಿದ್ದಾರೆ.

- Advertisement -


ಪತ್ರಕರ್ತರ ಮೇಲಿನ ಇತ್ತೀಚಿನ ಕೆಲವು ದಾಳಿ ಪ್ರಕರಣಗಳನ್ನು ಉಲ್ಲೇಖಿಸಿದ ಅವರು, ವೈಎಸ್ಆರ್ಸಿಪಿ ಮಾಧ್ಯಮಗಳ ವಿರುದ್ಧ ಸರಣಿ ದಾಳಿಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.



Join Whatsapp