ಲೋಕಸಭೆ ಚುನಾವಣೆ: ಕರ್ನಾಟಕದಿಂದ ಜೈಶಂಕರ್, ನಿರ್ಮಲಾ ಸೀತಾರಾಮನ್ ಸ್ಪರ್ಧೆ ಸಾಧ್ಯತೆ

Prasthutha|

ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಕ್ಷೇತ್ರಗಳಿಂದ ಬಿಜೆಪಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚು ಕಡಿಮೆ ಅವರು (ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಅಂತಿಮವಾಗಿದೆ. ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ? ಅದು ಕರ್ನಾಟಕ ಅಥವಾ ಬೇರೆ ಯಾವುದಾದರೂ ರಾಜ್ಯವಾಗಿರಬಹುದು ಎಂದು ಇನ್ನೂ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ.



Join Whatsapp