ಪ್ರತಿಭಟನೆ ವೇಳೆ ಡಿವೈಎಸ್ ಪಿ ಮೇಲೆ ಹಲ್ಲೆ: ಬಿಜೆಪಿ ಕಾರ್ಯಕರ್ತ ಅರೆಸ್ಟ್

Prasthutha|

ತುಮಕೂರು: ಪಾಕಿಸ್ತಾನ ಪರ ಘೋಷಣೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ವೇಳೆ ತುಮಕೂರು ನಗರ ಡಿವೈಎಸ್ ಪಿ.ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾನ್ ಹ್ಯಾಂಡಲ್ ಮಾಡಿದ್ದ ಆರೋಪಿ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ 353 ಅಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

- Advertisement -


ಬಿಜೆಪಿ ಕಾರ್ಯಕರ್ತ ವೆಂಕಟೇಶ (42) ಬಂಧಿತ ಆರೋಪಿ.


ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ನೂಕಾಟ ತಳ್ಳಾಟವಾಗಿತ್ತು. ಈ ಸಂದರ್ಭದಲ್ಲಿ ಡಿವೈಎಸ್ ಪಿ ಮೇಲೆ ಹಲ್ಲೆ ಆಗಿತ್ತು. ಜೊತೆಗೆ ಡಿವೈಎಸ್ ಪಿ ಮೂಗಿನ ಮೇಲೆ ರಕ್ತಸ್ರಾವ ಆಗಿತ್ತು. ಈ ಹಿನ್ನಲೆ ಇದೀಗ ಆರೋಪಿಯನ್ನ ಬಂಧಿಸಲಾಗಿದೆ.



Join Whatsapp