ಸೂಲಿಬೆಲೆಗೆ ಕಲಬುರಗಿ ಜಿಲ್ಲೆ ಪ್ರವೇಶ ನಿಷೇಧ

Prasthutha|

ಕಲಬುರಗಿ: ಚಿತ್ತಾಪುರದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಕಮಲಾಪುರದ ಕಿಣ್ಣಿ ಸಡಕ್ ಬಳಿ ಬುಧವಾರ ಮಧ್ಯರಾತ್ರಿ ಪೊಲೀಸರು ತಡೆಯೊಡ್ಡಿ ವಾಪಸ್ ಕಳುಹಿಸಿದರು.

- Advertisement -


ಚಿತ್ತಾಪುರ ಪಟ್ಟಣದ ಬಾಪುರಾವ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹಾಗೂ ನಮೋ ಬ್ರಿಗೇಡ್ ನಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


ಸೂಲಿಬೆಲೆ ಅವರ ಪ್ರಚೋದನಕಾರಿ ಭಾಷಣದಿಂದ ಶಾಂತಿಗೆ ಧಕ್ಕೆ ಬರುವ ಸಾಧ್ಯತೆಯ ಕಾರಣಕ್ಕೆ ಪ್ರವೇಶ ನಿರ್ಬಂಧಿಸಿ ಉಪ ವಿಭಾಗಾಧಿಕಾರಿ ರೂಪೇಂದ್ರ ಕೌರ್ ಅವರು ಆದೇಶ ಹೊರಡಿಸಿದ್ದರು. ಮಧ್ಯರಾತ್ರಿ 12 ಗಂಟೆಗೆ ಸುಮಾರಿಗೆ ಸೂಲಿಬೆಲೆ ಅವರನ್ನು ತಡೆದ ಕಮಲಾಪೂರ ಪೊಲೀಸರು, ಆದೇಶದ ಹಿನ್ನಲೆಯಲ್ಲಿ ಜಿಲ್ಲೆಯೊಳಗೆ ಪ್ರವೇಶಕ್ಕೆ ಅವಕಾಶ ನೀಡದೆ ಮರಳಿ ಬೀದರ್ ಕಡೆಗೆ ಕಳುಹಿಸಿದರು. ಈ ವೇಳೆ ಪೊಲೀಸರು ಮತ್ತು ಸೂಲಿಬೆಲೆ ನಡುವೆ ತೀವ್ರ ವಾಗ್ವಾದ ನಡೆಯಿತು.



Join Whatsapp