ಜನಾರ್ದನ ರೆಡ್ಡಿಯನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಹೇಳಿದ್ದೇನೆ: ಶ್ರೀರಾಮುಲು

Prasthutha|

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಬೇಕು ಎಂದು ಅಮಿತ್ ಶಾ ಅವರಿಗೆ ನನ್ನ ಅಭಿಪ್ರಾಯ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

- Advertisement -


ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಗೆ ಹೋಗಿದ್ದಾಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜನಾರ್ದನ ರೆಡ್ಡಿ ಅವರ ಕುರಿತಾಗಿ ನನ್ನೊಂದಿಗೆ ಚರ್ಚಿಸಿದರು.

ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕೆಂದು ನಾನು ನನ್ನ ಅಭಿಪ್ರಾಯ ತಿಳಿಸಿದ್ದೇನೆ. ರೆಡ್ಡಿ ಈ ಭಾಗದಲ್ಲಿ ಶಕ್ತಿ ಇರುವ ನಾಯಕ. ಅವರು ಪಕ್ಷಕ್ಕೆ ಬಂದರೆ ಬಿಜೆಪಿಗೆ ಒಳ್ಳೆಯದಾಗಲಿದೆ ಎಂದರು.



Join Whatsapp