ಮೃತ ರೈತ ಶುಭಕರನ್‌ಗೆ ಶ್ರದ್ಧಾಂಜಲಿ ಸಲ್ಲಿಸಿದ ಪಂಜಾಬ್ ವಿಧಾನಸಭೆ

Prasthutha|

ಚಂಡೀಗಢ: ರೈತರು ಮತ್ತು ಹರಿಯಾಣದ ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆಯಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್‌ಗೆ ಪಂಜಾಬ್ ವಿಧಾನಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

- Advertisement -

ಇತ್ತೀಚೆಗೆ ನಿಧನರಾದ ಮಾಜಿ ಉಪ ಸಭಾಪತಿ ಬಲದೇವ್ ರಾಜ್ ಚಾವ್ಲಾ, ಮಾಜಿ ಶಾಸಕರಾದ ರಂಜಿತ್ ಸಿಂಗ್ ತಲ್ವಂಡಿ, ಪ್ರಕಾಶ್ ಸಿಂಗ್ ಗಹರ್ದಿವಾಲಾ ಮತ್ತು ಸೋಹನ್ ಸಿಂಗ್, ಅಗ್ನಿವೀರ್ ಅಜಯ್ ಕುಮಾರ್ ಮತ್ತು ಸೇನಾ ಯೋಧ ಗುರುಪ್ರೀತ್ ಸಿಂಗ್ ಜೊತೆಗೆ ರೈತ ಶುಭಕರನ್ ಸಿಂಗ್‌ ಅವರ ಸ್ಮರಣೆಗಾಗಿ ಸದನದಲ್ಲಿ 2 ನಿಮಿಷಗಳ ಮೌನಾಚರಣೆ ಮಾಡಲಾಯಿತು.

ಫೆಬ್ರುವರಿ 21 ರಂದು ಪಂಜಾಬ್-ಹರಿಯಾಣ ಗಡಿಯಲ್ಲಿ ಮೊಕ್ಕಾಂ ಹೂಡಿದ್ದ ಪ್ರತಿಭಟನಕಾರರು ಬ್ಯಾರಿಕೇಡ್‌ಗಳತ್ತ ಮುನ್ನುಗ್ಗಲು ಯತ್ನಿಸಿದಾಗ ನಡೆದ ಘರ್ಷಣೆಯಲ್ಲಿ ಶುಭಕರನ್ (21) ಮೃತಪಟ್ಟಿದ್ದರು. ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.



Join Whatsapp