ಡಿ.ಕೆ.ಸುರೇಶ್ ‌ಠೇವಣಿ ಕಳೆದುಕೊಳ್ಳುತ್ತಾರೆ: ಬಿಜೆಪಿ ಚುನಾವಣಾ ಉಸ್ತುವಾರಿ

Prasthutha|

ಬೆಂಗಳೂರು‌: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ‌ಠೇವಣಿ ಕಳೆದುಕೊಳ್ಳುತ್ತಾರೆ. ಮೂರು-ನಾಲ್ಕು ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ‌ಅಭ್ಯರ್ಥಿ ಡಾ. ಮಂಜುನಾಥ್‌ ಗೆಲುವು ಸಾಧಿಸಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಹೇಳಿದ್ದಾರೆ.

- Advertisement -

ಮಾಧ್ಯಮದವರ ಜೊತೆ ಮಾತನಾಡಿದ ಅವರು, ದಾವಣಗೆರೆ ‌ಸೇರಿದಂತೆ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ‌ ಗೆಲ್ಲುತ್ತದೆ. ಕಾಂಗ್ರೆಸ್ ದೇಶದಲ್ಲಿ ಸಂಪೂರ್ಣ ಸರ್ವನಾಶವಾಗಿದೆ.‌ 30 ರಿಂದ 35 ಸ್ಥಾನ ಗೆಲ್ಲಬಹುದು. ನಾವು ಯಾವುದೇ ಗ್ಯಾರೆಂಟಿ ಬಗ್ಗೆ ಹೇಳಲ್ಲ. ಪ್ರಧಾನಿ ನರೇಂದ್ರ ಮೋದಿಯೇ ನಮಗೆ ಗ್ಯಾರೆಂಟಿ. ಇಡೀ ದೇಶದಲ್ಲಿ ಬಿಜೆಪಿ ಅಲೆ ಇದೆ. ಕಾಂಗ್ರೆಸ್‌ನವರಂತೆ ನಾವು ಭಾಷಣ ಮಾಡುತ್ತಾ ಸುತ್ತುವುದಿಲ್ಲ. ನಾವು ಈ ಚುನಾವಣೆ ಬಗ್ಗೆ ವಿಚಾರಿಸಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ಆಗುವ ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು

ಇನ್ನು ದಾವಣಗೆರೆಯಲ್ಲಿ ಭಿಜೆಪಿ ಭಿನ್ನಮತೀಯರ ಸಭೆಗೆ ಮಾಜಿ ಸಚಿವ ಕರುಣಾಕರ ರೆಡ್ಡಿ ಗೈರು ಹಾಜರಾಗಿದ್ದರು. ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರು, ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಚುನಾವಣೆ ಸಿದ್ಧತೆ ಹಿನ್ನೆಲೆ ಈ ಸಭೆ ಕರೆಯಲಾಗಿದೆ ಎಂದರು.



Join Whatsapp