ನಾಳೆ ಮಂಗಳೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ: ವಾಹನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

Prasthutha|

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14ರ ಭಾನುವಾರದಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಚಾರ ಮಾರ್ಪಾಡುಗೊಳಿಸಿ ಪೊಲೀಸರು ಆದೇಶ ಹೊರಡಿಸಿದ್ದಾರೆ.

- Advertisement -


ಸಾರ್ವಜನಿಕರ ಹಿತದೃಷ್ಟಿಯಿಂದ ಏಪ್ರಿಲ್ 14ರ ಮಧ್ಯಾಹ್ನ 2 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಣಯ ವ್ಯವಸ್ಥೆಯನ್ನು ಮಾಡಲಾಗಿದ್ದು, ವಾಹನಗಳ ಸಂಚಾರದ-ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರಗಳು ಈ ಕೆಳಗಿನಂತಿದೆ ಇರಲಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.


ವಾಹನ ಸಂಚಾರ ನಿಷೇಧಿತ ಮಾರ್ಗಗಳು
ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ, ಲಾಲ್ಬಾಗ್, ಬಲ್ಲಾಳ್ಬಾಗ್, ಕೋಡಿಯಾಲ್ಗುತ್ತು, ಬಿ.ಜಿ. ಸ್ಕೂಲ್ ಜಂಕ್ಷನ್, ಪಿ.ವಿ.ಎಸ್, ನವಭಾರತ ವೃತ್ತ, ಹಂಪನಕಟ್ಟೆವರೆಗೆ, ಕಾರ್ಸ್ಟ್ರೀಟ್, ಕುದ್ರೋಳಿ, ಕೂಳೂರು ಫೆರ್ರಿ ರಸ್ತೆ ಕಡೆ ಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ. ರಸ್ತೆವರೆಗೆ, ಬಿಜೈ ಕೆಎಸ್ಅರ್ಟಿಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿವಿಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

- Advertisement -


ಕೊಟ್ಟಾರ ಚೌಕಿ, ಉರ್ವಸ್ಟೋರ್, ಕೋಟೆಕಣಿ ಕ್ರಾಸ್ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ, ಮಣ್ಣಗುಡ್ಡ ಜಂಕ್ಷನ್ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್)ದ ಕಡೆಗೆ, ಉರ್ವ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್)ದ ಕಡೆಗೆ, ಕೆಎಸ್ಆರ್ಟಿಸಿಯಿಂದ ಲಾಲ್ಬಾಗ್ ಮೂಲಕ ನಾರಾಯಣ ಗುರು ವೃತ್ತ (ಲೇಡಿಹಿಲ್)/ಪಿವಿಎಸ್ ಕಡೆಗೆ, ಬಂಟ್ಸ್ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂಜಿ ರೋಡ್ಗೆ, ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆಯಿಂದ ನವಭಾರತ್ ಸರ್ಕಲ್ ಕಡೆಗೆ, ಎಂಜಿ ರಸ್ತೆಯಿಂದ ಜೈಲ್ ರೋಡ್ ಮೂಲಲ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.


ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು
ಬಜ್ಪೆ ವಿಮಾನ ನಿಲ್ದಾಣದಿಂದ ಕೆಂಜಾರು, ಮರವೂರು, ಕಾವೂರು, ಬೊಂದೇಲ್, ಮೇರಿಹಿಲ್, ಕೆಪಿಟಿ, ಕೊಟ್ಟಾರ ಚೌಕಿ, ಉರ್ವಸ್ಟೋರ್, ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್)ವರೆಗೆ ರಸ್ತೆಯ ಎರಡು ಬದಿ ಮತ್ತು ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀನಾರಾಯಣಗುರು ವೃತ್ತ, ಲಾಲ್ಬಾಗ್, ಬಲ್ಲಾಳ್ಬಾಗ್, ಕೋಡಿಯಾಲ್ ಗುತ್ತು, ಬಿಜಿ ಸ್ಕೂಲ್ ಜಂಕ್ಷನ್, ಪಿ.ವಿ.ಎಸ್, ನವಭಾರತ ವೃತ್ತ, ಸಿಟಿ ಸೆಂಟರ್, ಹಂಪನಕಟ್ಟೆವರೆಗೆ ಮತ್ತು ಪ್ರಧಾನಿ ವಾಪಸ್ ಬಜ್ಪೆ ವಿಮಾನ ನಿಲ್ದಾಣ ಕಡೆಗೆ ಸಂಚರಿಸುವ ರಸ್ತೆಯಾದ ಹಂಪನಕಟ್ಟ, ಎಲ್ಹೆಚ್ಹೆಚ್, ಬಾವುಟಗುಡ್ಡ, ಡಾ.ಅಂಬೇಡ್ಕರ್ ವೃತ್ತ, ಬಂಟ್ಸ್ ಹಾಸ್ಟೆಲ್, ಭಾರತ್ ಬೀಡಿ , ಕದ್ರಿ ಕಂಬಳ, ಭಟ್ಟಗುಡ್ಡೆ ರಸ್ತೆಯ ಎರಡು ಬದಿಯಲ್ಲಿ ಹಾಗೂ ಕಾವೂರು, ಪಂಜಿಮೊಗರು, ಕೂಳೂರು 4ನೇ ಮೈಲು, ಕೊಟ್ಟಾರ ಚೌಕಿವರೆಗೆ ರಸ್ತೆಯ ಎರಡು ಬದಿಯಲ್ಲಿ, ಹಂಪನಕಟ್ಟ, ಎಲ್.ಹೆಚ್.ಹೆಚ್, ಬಲ್ಮಠ ರೋಡ್, ರೂಪಾ ಹೋಟೆಲ್ ರಸ್ತೆ, ಡಾ.ಅಂಬೇಡ್ಕರ್ ವೃತ್ತ, ಕಲೆಕ್ಟರ್ಸ್ಗೇಟ್ ವೃತ್ತ, ಹಾರ್ಟಿಕಲ್ಚರ್ ಜಂಕ್ಷನ್, ಸೈಂಟ್ ಆಗ್ನೇಸ್, ಶಿವಭಾಗ್, ನಂತೂರು ವೃತ್ತ, ಪದುವಾ, ಕೆಪಿಟಿವರೆಗೆ ಎರಡು ಬದಿಯ ರಸ್ತೆಗಳಲ್ಲಿ, ಬಿಜಿ ಜಂಕ್ಷನ್, ಜೈಲ್ ರೋಡ್, ಬಿಜೈ ಚರ್ಚ್ ರೋಡ್ ರವರೆಗೆ ಎರಡು ಬದಿಯ ರಸ್ತೆಗಳಲ್ಲಿ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.


ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ
ಉಡುಪಿ ಕಡೆಯಿಂದ ಮಂಗಳೂರಿಗೆ ಬರುವ ಎಲ್ಲಾ ಬಸ್ ಹಾಗೂ ಎಲ್ಲಾ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್, ಕೆಪಿಟಿ ಜಂಕ್ಷನ್, ನಂತೂರು ಜಂಕ್ಷನ್, ಶಿವಭಾಗ್ ಜಂಕ್ಷನ್, ಸಂತ ಆಗ್ನೆಸ್, ಹಾರ್ಟಿಕಲ್ಚರ್ ಜಂಕ್ಷನ್, ಲೋವರ್ ಬೆಂದೂರು, ಕರಾವಳಿ ಜಂಕ್ಷನ್, ಕಂಕನಾಡಿ ಜಂಕ್ಷನ್, ಅವೇರಿ ಜಂಕ್ಷನ್, ಮಿಲಾಗ್ರಿಸ್ ಜಂಕ್ಷನ್, ಹಂಪನಕಟ್ಟ ಜಂಕ್ಷನ್, ಕ್ಲಾಕ್ಟವರ್ ಮೂಲಕ ಚಲಿಸುವುದು ಹಾಗೂ ಸ್ಟೇಟ್ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿಗೋಷನ್, ಕ್ಲಾಕ್ ಟವರ್, ರೈಲ್ವೆ ಸ್ಟೇಷನ್ ಜಂಕ್ಷನ್, ನಂದಿಗುಡ್ಡ ರೋಡ್, ಕೋಟಿಚೆನ್ನಯ್ಯ ಸರ್ಕಲ್, ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು. ಪಂಪುವೆಲ್ ಕಡೆಯಿಂದ ನಗರಕ್ಕೆ ಬರುವ ಬಸ್ ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್, ಕಂಕನಾಡಿ ಜಂಕ್ಷನ್, ಅವೇರಿ ಜಂಕ್ಷನ್, ಮಿಲಾಗ್ರಿಸ್ ಜಂಕ್ಷನ್, ಹಂಪನಕಟ್ಟ ಜಂಕ್ಷನ್, ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಸ್ಟೇಟ್ಬ್ಯಾಂಕ್ ಕಡೆಯಿಂದ ಪಂಪ್ವೆಲ್ಕಡೆಗೆ ಹೋಗುವ ವಾಹನಗಳು ಲೇಡಿಗೋಷನ್, ಕ್ಲಾಕ್ ಟವರ್, ರೈಲ್ವೆ ಸ್ಟೇಷನ್ ಜಂಕ್ಷನ್, ನಂದಿಗುಡ್ಡ ರೋಡ್, ಕೋಟಿಚೆನ್ನಯ್ಯ ಸರ್ಕಲ್, ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.


ಕಾರ್ಸ್ಟ್ರೀಟ್, ಕುದ್ರೋಳಿ ಕಡೆಯಿಂದ ಬರುವ ಎಲ್ಲಾ ವಾಹನಗಳನ್ನು ಮಣ್ಣಗುಡ್ಡೆ, ಉರ್ವಮಾರ್ಕೆಟ್ ಮೂಲಕ ಅಶೋಕ ನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು. ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆಎಸ್ಆರ್ಟಿಸಿ ಜಂಕ್ಷನ್ ಮೂಲಕ ಕೊಟ್ಟಾರ ಕ್ರಾಸ್/ಕುಂಟಿಕಾನದ ಕಡೆಗೆ ಸಂಚರಿಸುವುದು. ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆಎಸ್ಆರ್ಟಿಸಿ ಜಂಕ್ಷನ್ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.


ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸಂಜೆ 5ರೊಳಗೆ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆಗೊಳಿಸಿ ಪ್ರಧಾನಿಯ ರೋಡ್ ಶೋವನ್ನು ವೀಕ್ಷಣೆ ಮಾಡಲು ನಿಗದಿಪಡಿಸಿದ ಕರಾವಳಿ ಮೈದಾನ, ಲೇಡಿಹಿಲ್ ಶಾಲಾ ಮೈದಾನ, ಲೇಡಿಹಿಲ್ ಚರ್ಚ್ ಮೈದಾನ, ಉರ್ವ ಮಾರ್ಕೆಟ್ ಮೈದಾನ, ಉರ್ವ ಸ್ಟೋರ್ ಮೈದಾನ, ಉರ್ವ ಕೆನರಾ ಶಾಲಾ ಮೈದಾನ, ಕೆನರಾ ಕಾಲೇಜು ಮೈದಾನ, ಡೊಂಗರಕೇರಿ ಕೆನರಾ ಶಾಲಾ ಮೈದಾನ, ಗಣಪತಿ ಶಾಲಾ ಮೈದಾನ, ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೇಲ್, ಸಿ.ವಿ ನಾಯಕ್ ಹಾಲ್ ಮೈದಾನ, ಟಿ.ಎಂ.ಎ ಪೈ ಹಾಲ್ ಮೈದಾನ, ಬಿ.ಇ.ಎಂ ಶಾಲಾ ಮೈದಾನ, ನೆಹರೂ ಮೈದಾನ, ಪುರಭವನ ಪಾರ್ಕಿಂಗ್ ಸ್ಥಳ, ಕದ್ರಿ ಮೈದಾನ, ಕೆಪಿಟಿ ಕಾಲೇಜು ಮೈದಾನ, ಕೆಟಿಪಿ ಬಳಿಯ ಆರ್ಟಿಒಮೈದಾನ, ಪದುವಾ ಕಾಲೇಜು ಮೈದಾನ, ಗೋಲ್ಡ್ ಫಿಂಚ್ ಸಿಟಿ ಮೈದಾನ ಕೂಳೂರು, ಸುಲ್ತಾನ್ ಬತ್ತೇರಿ ಗ್ರೌಂಡ್ಸ್, ಗೋಕರ್ಣಥೇಶ್ವರ ಕಾಲೇಜು ಗ್ರೌಂಡ್, ಎಮ್ಮೆಕರೆ ಮೈದಾನ, ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ, ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್, ಮಿಲಾಗ್ರಿಸ್ ಕಾಲೇಜು ಮೈದಾನ, ಬಲ್ಮಠ ಶಾಂತಿ ನಿಲಯ ಮೈದಾನ, ಸಂತ ಸೆಬಾಸ್ಟಿನ್ ಹಾಲ್ ಪಾರ್ಕಿಂಗ್ (ಸಂತ ಅಗ್ನೇಸ್ ಶಾಲೆ) ಈ ಸ್ಥಳಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಬೇಕು.



Join Whatsapp