ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್: ಆರೋಪಿಗಳು 10 ದಿನಗಳ ಕಾಲ NIA ವಶಕ್ಕೆ

Prasthutha|

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ ವಶಕ್ಕೆ ನೀಡಿ ಆದೇಶಿಸಿದ್ದಾರೆ.

- Advertisement -


ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಎನ್ ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.



Join Whatsapp