ಸುವರ್ಣ ಟಿವಿ ವಿರುದ್ಧ ಅಸಹ್ಯ ವ್ಯಕ್ತಪಡಿಸಿದ ಎಸ್ಡಿಪಿಐ

Prasthutha|

ಬೆಂಗಳೂರು: ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಿಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಸುವರ್ಣ ನ್ಯೂಸ್ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಸ್ಡಿಪಿಐ ತೀವ್ರ ಅಸಹ್ಯ ವ್ಯಕ್ತಪಡಿಸಿದೆ.

- Advertisement -

ನಿಮ್ಮ ಮನಸ್ಥಿತಿ ಹಾಗೂ ಉದ್ದೇಶ ಏನು ಅನ್ನೋದು ಜನರಿಗೆ ಅರ್ಥವಾಗಿದೆ. ಥೂ ನಿಮ್ಮ ಜನ್ಮಕ್ಕೆ… ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅಪ್ಝಲ್ ಕೊಡ್ಲಿಪೇಟೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಈಗಾಗಲೇ ಸುವರ್ಣ ನ್ಯೂಸ್ ಚಾನೆಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತರಾಗಿರುವ ತನ್ವೀರ್ ಅಹ್ಮದ್ ನೀಡಿದ್ದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಐಪಿಸಿ 1860ರ ಅಡಿಯಲ್ಲಿನ 505(2) ಸೆಕ್ಷನ್ ಗಳ ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿರುವ ಬಗ್ಗೆ ಎಫ್ ಐಆರ್ ದಾಖಲಿಸಿದ್ದಾರೆ. ಮೇ 9ರ ರಾತ್ರಿ 8.30ಕ್ಕೆ ಪ್ರಸಾರಗೊಂಡಿರುವ ಈ ಕಾರ್ಯಕ್ರಮವನ್ನು ಸುವರ್ಣ ನ್ಯೂಸ್‌ನ ಅಜಿತ್ ಹನುಮಕ್ಕನವರ್ ನಿರೂಪಿಸುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನ ಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿದ್ದರು. ಇದರ ವಿಡಿಯೋ ಹಾಗೂ ಸ್ಕ್ರೀನ್‌ಶಾಟ್‌ಗಳ ವಿಡಿಯೋವನ್ನು ಆಲ್ಟ್ನ್ಯೂಸ್‌ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೇರ್ X ಖಾತೆಯಲ್ಲಿ ಹಂಚಿಕೊಂಡಿದ್ದರು.

- Advertisement -

ಇದು ಉದ್ದೇಶಪೂರ್ವಕವಾಗಿ ಆದ ತಪ್ಪಲ್ಲ. ಆಕಸ್ಮಿಕವಾಗಿ ಈ ತಪ್ಪು ಜರುಗಿದೆ. ತಪ್ಪು ಗೊತ್ತಾದ ಕೂಡಲೇ ಗ್ರಾಫಿಕ್ಸ್ ಬದಲಾಯಿಸಲಾಗಿದೆ. ಈ ಅಚಾತುರ್ಯಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ ಸುವರ್ಣ ನ್ಯೂಸ್ ವಿಷಾದ ವ್ಯಕ್ತಪಡಿಸಿತ್ತು.

ಆದರೆ ಇದನ್ನು ತಪ್ಪೊಪ್ಪಿಗೆ ಹೇಳಿಕೆ ಅನ್ನಬಹುದೆ? ಸ್ಪಷ್ಟೀಕರಣ ಅನ್ನಬಹುದೆ? ಅಥವಾ ಕೋಮು ದ್ವೇಷ ಮೂಡಿಸಿ ಗಿಮಿಕ್ ಮಾಡಲು ಮಾಡಿದ ಉದ್ದೇಶಪೂರ್ವಕ ಆಚಾತುರ್ಯ ಎನ್ನಬಹುದೇ..? ಎಂದು SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಝಲ್ ಕೊಡ್ಲಿಪೇಟೆ ಪ್ರಶ್ನಿಸಿದ್ದಾರೆ‌.

ಮೋದಿ ಮೊದಲನೇ ಹಂತದ ಮತದಾನ ಮುಗಿದ ಕೂಡಲೇ ಮುಸ್ಲಿಮರ ಮೇಲೆ ಮುಗಿಬಿದ್ದು ಮತ ಬ್ಯಾಂಕ್ ಗಿಮಿಕ್ ಮಾಡಿದಂತೆ ನಿಮ್ಮ ಚಾನೆಲ್ ಕೂಡ ಅದೇ ಹಾದಿ ಹಿಡಿದಿರುವುದು ದುರಂತ ಎಂದು ಎಸ್ಡಿಪಿಐ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮುಸ್ಲಿಮರ ವಿರುದ್ಧ ಸದಾ ದ್ವೇಷ ಕಾರುವ ಸುವರ್ಣ ನ್ಯೂಸ್ ಚಾನೆಲ್ ನಿರೂಪಕ ಅಜಿತ್ ಮಾಧ್ಯಮ ಕ್ಷೇತ್ರಕ್ಕೆ ಕಳಂಕ. ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ ಇಂತಹ ವ್ಯಕ್ತಿಗಳನ್ನ ದೇಶದಿಂದಲೇ ಗಡಿಪಾರು ಮಾಡಬೇಕಾಗಿದೆ ಎಂದು ಎಸ್‌ಡಿಪಿಐ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Join Whatsapp