ಸುಳ್ಯ: ವಿದ್ಯಾರ್ಥಿ ಆತ್ಮಹತ್ಯೆ

Prasthutha|

ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

- Advertisement -

ಬೆಳ್ಳಾರೆ ಗ್ರಾಮದ ನೆಟ್ಟಾರಿನ ಕಿನ್ನಿಮಜಲು ನಿವಾಸಿ ಚರಣ್‌ ಕುಮಾರ್‌ ಕೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಚರಣ್‌ ಕುಮಾರ್‌ ಸುಳ್ಯ ಖಾಸಗಿ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ. ಈತ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



Join Whatsapp