ಚಿಕ್ಕಮಗಳೂರು,‌ ಉ.ಕ.ದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

Prasthutha|

ಚಿಕ್ಕಮಗಳೂರು: ನಗರದಲ್ಲಿ ಬುಧವಾರ ಭಾರೀ ಮಳೆ ಸುರಿದಿದೆ. ಚಿಕ್ಕಮಗಳೂರು ನಗರ, ಮೂಡಿಗೆರೆ ಕೊಪ್ಪ, ಕಳಸದಲ್ಲಿ ಭಾರೀ ಮಳೆಯಾಗಿದೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದಲ್ಲಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬಿರುಗಾಳಿ, ಮಳೆಯಿಂದ ಮರಗಳು, 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದೆ.

ಶಿರಸಿ ಪಟ್ಟಣದ ಸಹ್ಯಾದ್ರಿ ಕಾಲೋನಿಗೆ ತೆರಳುವ ರಸ್ತೆ ಬಂದ್ ಆಗಿತ್ತು. ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತವಾಗಿ ಜನ ಕತ್ತಲೆಯಲ್ಲಿ ಕಾಲ ಕಳೆದಿದ್ದಾರೆ.

- Advertisement -

ಉಡುಪಿಯಲ್ಲೂ ಮಂಗಳವಾರ ಧಾರಾಕಾರ ಮಳೆ ಸುರಿದಿದೆ. ಉಡುಪಿ ನಗರ, ಮಣಿಪಾಲ, ಮಲ್ಪೆ, ಸಂತೆಕಟ್ಟೆ ಸುತ್ತುಮುತ್ತ ಉತ್ತಮ ಮಳೆಯಾಗಿದೆ. ಈ ನಡುವೆ ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಸಿಡಿಲು ಬಡಿದು 38 ವರ್ಷದ ಸುರೇಶ್ ಶೆಟ್ಟಿ ಸಾವನಪ್ಪಿದ್ದಾರೆ.



Join Whatsapp