ಹುಬ್ಬಳ್ಳಿಯಲ್ಲಿ‌ ನೇಹಾ ಹತ್ಯೆ ಮಾದರಿಯಲ್ಲಿ ಮತ್ತೊಂದು ದಾರುಣ ಕೃತ್ಯ: ಲಕ್ಷ್ಮಿ ಹೆಬ್ಬಾಳಕರ್, ಶೆಟ್ಟರ್ ಖಂಡನೆ

Prasthutha|

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಕೊಲೆಯಾಗಿದ್ದು ದಿಗ್ಭ್ರಮೆ ಉಂಟಾಗಿದೆ. ಆರೋಪಿಯ ಬಂಧನಕ್ಕೆ ತುರ್ತು ಕ್ರಮ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

- Advertisement -

ನೇಹಾ ಹಿರೇಮಠ ಕೊಲೆ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಹೇಯ ಕೃತ್ಯ ನಡೆದಿದೆ. ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಪ್ರೀತಿ, ಪ್ರೇಮದ ಹೆಸರಿನಲ್ಲಿ ಯುವ ಜನಾಂಗ ಇಂತಹ ದುಷ್ಕೃತ್ಯಕ್ಕೆ ಇಳಿಯುತ್ತಿರುವುದು ತೀವ್ರ ನೋವುಂಟು ಮಾಡಿದೆ. ಈ ಪ್ರಕರಣದ ಸುದ್ದಿ ತಿಳಿದ ತಕ್ಷಣ ಹಿರಿಯ ಅಧಿಕಾರಿಗಳ ಜೊತೆಗೆ ಮಾತನಾಡಿ, ಘಟನೆ ಕುರಿತು ತುರ್ತು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಆರೋಪಿಯ ಬಂಧನದ ಜೊತೆಗೆ, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಲಾಗುವುದು. ಯುವತಿಯ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ’ ಎಂದು ಸಚಿವರು ತಿಳಿಸಿದ್ದಾರೆ

ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕೂಡಲೇ ಪೊಲೀಸ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು‌ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಆಗ್ರಹಿಸಿದ್ದಾರೆ.

- Advertisement -

ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರಿಕೆ ವಹಿಸಲು ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.



Join Whatsapp