ಹುಬ್ಬಳ್ಳಿ: ಅಂಜಲಿಯ ಮೃತದೇಹ ಅಂತ್ಯಕ್ರಿಯೆಗೆ ರವಾನಿಸದಂತೆ ಕಿಮ್ಸ್ ಆಸ್ಪತ್ರೆ ಮುಂದೆ ತಡೆ

Prasthutha|

ಹುಬ್ಬಳ್ಳಿ: ಪಾಗಲ್ ಪ್ರೇಮಿಯಿಂದ ಕ್ರೂರವಾಗಿ ಕೊಲೆಯಾದ ಅಂಜಲಿಯ ಮೃತದೇಹ ಅಂತ್ಯಕ್ರಿಯೆಗೆ ರವಾನಿಸದಂತೆ ತಡೆ ಹಿಡಿದ ಘಟನೆ ಕಿಮ್ಸ್ ಆಸ್ಪತ್ರೆ ಮುಂದೆ ನಡೆದಿದೆ.

- Advertisement -

ಘಟನೆಯಿಂದ ಆಕ್ರೋಶಗೊಂಡಿರುವ ಕುಟುಂಬಸ್ಥರು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿಗಳು ಅಂಜಲಿ ಮನೆಗೆ ಬರುವವರೆಗೂ ಮೃತ ದೇಹ ಎತ್ತಲು ಬಿಡುವುದಿಲ್ಲ ಎಂದು ಕಿಮ್ಸ್ ಆಸ್ಪತ್ರೆ ಹಾಗೂ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಅಂಜಲಿ ಮೃತದೇಹ ಅಂತಿಮ ಆಸ್ಪತ್ರೆ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ಆಂಬ್ಯುಲೆನ್ಸ್ ನಲ್ಲಿ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಪ್ರತಿಭಟನಾಕಾರರು ಆಂಬ್ಯುಲೆನ್ಸ್ ಮುಂದೆ ಸಾಗದಂತೆ ತಡೆ ನೀಡಿದರು. ಇನ್ನೂ ಎಷ್ಟು ಹೆಣ್ಣುಮಕ್ಕಳ ಜೀವ ಬಲಿಯಾಗಬೇಕು ಎಂದೆಲ್ಲ ಕಣ್ಣೀರಿಟ್ಟರು. ಈ ವೇಳೆ ನೇಹಾ ಹಿರೇಮಠ ತಂದೆ ನಿರಂಜನ್ ಹಿರೇಮಠ ಸಹ ಧರಣಿಯಲ್ಲಿದ್ದರು.

- Advertisement -

ಹಂತಕನ್ನೂ ಗಲ್ಲಿಗೇರಿಸುವ ಮೂಲಕ ಯುವತಿ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಗುಂಡಾ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಇದೊಂದು ಹೀನ ಕೃತ್ಯ ಎಂದೆಲ್ಲ ಧಿಕ್ಕಾರ ಕೂಗಿದರು. ಸರ್ಕಾರ ಆಡಳಿತ ವಿರುದ್ಧ ಕಿಡಿ ಕಾರಿದರು. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರ ಮಧ್ಯೆ ವಾಗ್ವಾದ, ತಳ್ಳಾಟ ನೂಕಾಟ ನಡೆಯಿತು. ನಂತರ ಪೊಲೀಸರ ಆಂಬ್ಯುಲೆನ್ಸ್ ಸಾಗಲು ಅನುವು ಮಾಡಿದರು.



Join Whatsapp