SDPI ವತಿಯಿಂದ ಉಳ್ಳಾಲದಲ್ಲಿ ಲೀಡರ್ಸ್ ಮೀಟ್ ಕಾರ್ಯಕ್ರಮ

Prasthutha|

ಉಳ್ಳಾಲ: ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷದ ನಾಯಕರ ಶೃಂಗ ಸಭೆ ಕಲ್ಲಾಪು ಯುನಿಟಿ ಮಿನಿ ಹಾಲ್ ಇಲ್ಲಿ ನಡೆಯಿತು.

- Advertisement -

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಳ್ಳಾಲ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಎಸ್ ಎಂ ಬಶೀರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಹಮೀದ್ ಮಾಸ್ಟರ್ ಭಾರತ ದೇಶದ ಪ್ರಸಕ್ತ ಸನ್ನಿವೇಶ ಹಾಗೂ ಇದಕ್ಕಿರುವ ಪರಿಹಾರ ವನ್ನು ನಾಯಕರಿಗೆ ಮನವರಿಕೆ ಮಾಡಿಕೊಟ್ಟರು.

- Advertisement -

ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಅಡ್ವೋಕೇಟ್ ಮಜೀದ್ ಖಾನ್ ಸಮಾರೋಪ ಭಾಷಣವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಮಾಲ್ ಜೋಕಟ್ಟೆ, ಉಳ್ಳಾಲ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಫಾರೂಕ್ ಝಲ್ ಝಲ್, ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ಹಾಗೂ ಕ್ಷೇತ್ರ ವ್ಯಾಪ್ತಿಯ ಎಲ್ಲಾ ನಾಯಕರು ಉಪಸ್ಥಿತರಿದ್ದರು.

ರಹಿಮಾನ್ ಬೋಳಿಯಾರ್ ಕಾರ್ಯಕ್ರಮ ನಿರೂಪಿಸಿದರು



Join Whatsapp