ನನ್ನ, ದೇವೇಗೌಡರ ಮೇಲೆ ಗೌರವ ಇದ್ರೆ 48 ಗಂಟೆಗಳಲ್ಲಿ ಬಂದು ಶರಣಾಗು: ಪ್ರಜ್ವಲ್ ಗೆ ಕುಮಾರಸ್ವಾಮಿ ಮನವಿ

Prasthutha|

ಬೆಂಗಳೂರು: ನನ್ನ ಹಾಗೂ ಹೆಚ್ ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದಾರೆ.

- Advertisement -


ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನೆಲದ ಕಾನೂನು ಇದೆ, ಯಾಕೆ ಹೆದರಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದು ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಎಲ್ಲರೂ ಅಸಹ್ಯ ಪಡುವ ಪ್ರಕರಣ ಇದು. ಈ ಕೇಸ್ನಲ್ಲಿ ನನ್ನ ಹಾಗೂ ದೇವೇಗೌಡರನ್ನ ತಾಳೆ ಹಾಕಿದ್ದಾರೆ ಎಂದು ಹೇಳಿದ್ದಾರೆ.



Join Whatsapp