ಚಿಕ್ಕಮಗಳೂರು: ಈಜು ಕಲಿಯಲು ತೆರಳಿದ್ದ13 ವರ್ಷದ ಬಾಲಕ ನೀರಲ್ಲಿ ಮುಳುಗಿ ಮೃತ

Prasthutha|

ಚಿಕ್ಕಮಗಳೂರು: ರಾಜ್ಯದ ವಿವಿಧೆಡೆ ನೀರಿಗಿಳಿದು ಸಾವನ್ನಪ್ಪಿದ ದುರಂತಗಳು ಪದೇ ಪದೇ ನಡೆಯುತ್ತಿದರೂ ಜನರು ಎಚ್ಚೆತ್ತುಕೊಂಡಿಲ್ಲ. ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರು ಪಾಲಾಗಿರುವ ಘಟನೆ ಇಂದು ಚಿಕ್ಕಮಗಳೂರು ನಗರ ಹೊರವಲಯದ ಕೋಟೆ ಕೆರೆಯಲ್ಲಿ ನಡೆದಿದೆ.

- Advertisement -

ಮೃತ ಬಾಲಕನನ್ನು ಶಶಾಂಕ್ (13) ಎಂದು ಹೇಳಲಾಗುತ್ತಿದ್ದು, ಶಾಲೆಗೆ ರಜೆ ಇದ್ದ ಕಾರಣ ತನ್ನ ಮೂವರು ಸ್ನೇಹಿತರ ಜೊತೆ ಕೋಟೆ ಕೆರೆಯಲ್ಲಿ ಈಜು ಕಲಿಯಲು ಹೋಗಿದ್ದರು. ಕೆರೆಯಲ್ಲಿ ಊಳು ತುಂಬಿದ್ದ ಕಾರಣ ಬಾಲಕ ಶಶಾಂಕ್ ನ ಕಾಲು ಊಳಿನಲ್ಲಿ ಸಿಕ್ಕಿಕೊಂಡು ಬಾಲಕ ಮೇಲೆ ಸಾಧ್ಯವಾಗದೆ ಸಾವನ್ನಪ್ಪಿದ್ದಾನೆ.

ಮೃತ ಶಾಶಂಕ್ ತಾಯಿ ಸ್ಕೂಲ್ ಟೀಚರ್ ಆಗಿದ್ದಾರೆ.ಆದರೆ ಬಾಲಕ ಶಶಾಂಕ್ ಜೊತೆ ಹೋಗಿದ್ದ ಉಳಿದ ಮೂವರು ಅಪಾಯದಿಂದ ಪಾರಾಗಿದ್ದಾರೆ.ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾಲಕನ ಮೃತ ದೇಹವನ್ನು ಕೆರೆಯಿಂದ ಮೇಲೆ ತೆಗೆದಿದ್ದಾರೆ.



Join Whatsapp