ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚನೆ: ಲಾಲು ಪ್ರಸಾದ್

Prasthutha|

ಪಟ್ನಾ: ಕೇಂದ್ರದಲ್ಲಿ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಮಂಗಳವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -


ಜನರ ಸೇವೆ ಸಲ್ಲಿಸಲು ತನ್ನನ್ನು ದೇವರು ಕಳುಹಿಸಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಲಾಲು ಲೇವಡಿ ಮಾಡಿದ್ದಾರೆ.


ಜೂನ್ 4ರಂದು ಎಲ್ಲ ಸ್ಪಷ್ಟವಾಗಲಿದ್ದು, ‘ಇಂಡಿಯಾ’ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಅವರು ಹೇಳಿದ್ದಾರೆ.

- Advertisement -


‘ದೇವರ ಅವತಾರ ಎಂದು ಮೋದಿ ತಮ್ಮನ್ನು ತಾವೇ ಕರೆಯುತ್ತಾರೆ. ದೇವರ ಸಂದೇಶವಾಹಕ ಎಂದು ಹೇಳುತ್ತಾರೆ. ಲೋಕಸಭೆ ಚುನಾವಣೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟಗೊಳ್ಳಲಿದೆ. ಮೋದಿಗೆ ತಕ್ಕ ಉತ್ತರ ಸಿಗಲಿದೆ’ ಎಂದು ಅವರು ಹೇಳಿದ್ದಾರೆ.



Join Whatsapp