ವಾಲ್ಮೀಕಿ ನಿಗಮ ಹಗರಣ: ಸಚಿವ ನಾಗೇಂದ್ರ ವಜಾಕ್ಕೆ ಬಿಜೆಪಿ ಗಡುವು

Prasthutha|

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಲು ಜೂನ್ 6ರವರೆಗೆ ಗಡುವು ನೀಡಿರುವ ಬಿಜೆಪಿ, ಅವರಿಂದ ರಾಜೀನಾಮೆ ಪಡೆಯದೇ ಇದ್ದರೆ ರಾಜ್ಯ ವ್ಯಾಪಿ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ ಹೇಳಿದೆ.

- Advertisement -

ಪಕ್ಷದ ಕಚೇರಿಯಲ್ಲಿ ಗುರುವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರೋಧಪಕ್ಷದ ನಾಯಕ ಆರ್.ಅಶೋಕ ಅವರು, ಈ ಪ್ರಕರಣವನ್ನು ತಾರ್ಕಿಕ ಅಂತ್ಯ ಮುಟ್ಟಿಸದೇ ವಿರಮಿಸುವುದಿಲ್ಲ ಎಂದು ಹೇಳಿದರು.


ದಲಿತ ವರ್ಗದವರಿಗೆ ಸೇರಿದ ಹಣವನ್ನು ಈ ಸರ್ಕಾರ ಲೂಟಿ ಮಾಡಿದೆ. ಈ ಹಣವನ್ನು ಆಂಧ್ರ, ತೆಲಂಗಾಣ ಮುಂತಾದ ಕಡೆಗಳಲ್ಲಿ ಡ್ರಾ ಮಾಡಿಕೊಳ್ಳಲಾಗಿದೆ. ಇವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬರದೇ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು.



Join Whatsapp