ಕಾಶ್ಮೀರದಲ್ಲಿ 150 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್: 21 ಮಂದಿ ಮೃತ್ಯು

Prasthutha|

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್​​​​ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 21 ಮಂದಿ ಮೃತಪಟ್ಟು 40 ಮಂದಿ ಗಾಯಗೊಂಡಿದ್ದಾರೆ.

- Advertisement -

ಉತ್ತರ ಪ್ರದೇಶದ ಬಸ್ ಜಮ್ಮುವಿನಿಂದ ಶಿವಖೋಡಿಗೆ ಹೋಗುತ್ತಿತ್ತು. ಜಮ್ಮು-ಪೂಂಚ್ ಹೆದ್ದಾರಿಯ ಅಖ್ನೂರ್ ಪ್ರದೇಶದ ಚೋಕಿ ಚೋರಾ ಪ್ರದೇಶದ ತಂಗ್ಲಿ ತಿರುವಿನಲ್ಲಿ ರಸ್ತೆಯಿಂದ ಜಾರಿ ಸುಮಾರು 150 ಅಡಿ ಆಳದ ಕಂದಕಕ್ಕೆ​ ಬಿದ್ದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸಾರಿಗೆ ಆಯುಕ್ತ ರಾಜಿಂದರ್ ಸಿಂಗ್ ತಾರಾ ತಿಳಿಸಿದ್ದಾರೆ.

ಪೊಲೀಸರು ಮತ್ತು ಸ್ಥಳೀಯ ಜನರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

ಪ್ರಧಾನಿ ಸಂತಾಪ

ಆಘಾತಕಾರಿ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಖ್ನೂರ್‌ನಲ್ಲಿ ಸಂಭವಿಸಿದ ಬಸ್ ಅಪಘಾತವು ಹೃದಯ ವಿದ್ರಾವಕವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡುವಂತೆ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.



Join Whatsapp