ಸಂವಿಧಾನ, ಪ್ರಜಾಪ್ರಭುತ್ವ ಉಳಿಸಲು ಇಂದು ಕೊನೆಯ ಹಂತ ಮತದಾನ: ಖರ್ಗೆ

Prasthutha|

ಬೆಂಗಳೂರು: ಲೋಕಸಭಾ ಚುನಾವಣೆಯ ಏಳನೇ ಹಾಗೂ ಕೊನೆಯ ಹಂತದ ಮತದಾನ ಇಂದು ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ನನ್ನ ಪ್ರೀತಿಯ ದೇಶವಾಸಿಗಳೇ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಇಂದು ಕೊನೆಯ ಹಂತದ ಮತದಾನವಾಗಿದೆ. ಇಂಡಿಯಾ ಕೂಟ ತನ್ನೆಲ್ಲ ಶಕ್ತಿಯಿಂದ ಸರ್ವಾಧಿಕಾರಿ ಶಕ್ತಿಗಳನ್ನು ಎದುರಿಸುತ್ತಿದೆ. ಹೋರಾಟವು ಅಂತಿಮ ಹಂತದಲ್ಲಿದೆ. ಆರು ಹಂತಗಳ ಚುನಾವಣೆಯಲ್ಲಿ ಜನ ನಮಗೆ ಬೆಂಬಲ ನೀಡಿದ್ದಾರೆ. ಹಾಗೇ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಗಳನ್ನು ಜಾರಿಗೊಳಿಸುವುದನ್ನು ಎದುರು ನೋಡುತ್ತಿದ್ದಾರೆ’ ಎಂದು ಹೇಳಿದ್ದಾರೆ.



Join Whatsapp