ಕೇಜ್ರಿವಾಲ್ ಮಧ್ಯಂತರ ಜಾಮೀನು ಅರ್ಜಿಗೆ ED ವಿರೋಧ

Prasthutha|

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಕೆಯಾದ ಅರ್ಜಿಗೆ ಜಾರಿ ನಿರ್ದೇಶನಾಲಯ (ED) ಆಕ್ಷೇಪ ವ್ಯಕ್ತಪಡಿಸಿದೆ.

- Advertisement -

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಕಾವೇರಿ ಬವೇಜಾ ಅವರಿದ್ದ ಪೀಠದ ಎದುರು ವಾದ ಮಂಡಿಸಿದ ಜಾರಿ ನಿರ್ದೇಶನಾಲಯ ಪರ ವಕೀಲರು, ‘ಕೇಜ್ರಿವಾಲ್ ಅವರು ವಾಸ್ತಾಂಶವನ್ನು ಮರೆಮಾಚಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಇದರಲ್ಲಿ ಅವರ ಆರೋಗ್ಯ ಸಂಬಂಧಿತ ಮಾಹಿತಿಯೂ ಸೇರಿದೆ’ ಎಂದಿದ್ದಾರೆ.



Join Whatsapp