ಕಾರಿನಲ್ಲಿ ಮಾರಕಾಯುಧ: ಸುರತ್ಕಲ್ ಫಾಝಿಲ್ ಕೊಲೆ ಆರೋಪಿ ಸೇರಿ 6 ಮಂದಿ ವಶಕ್ಕೆ

Prasthutha|

ಮಂಗಳೂರು: ಕಾರಿನಲ್ಲಿ ಮಾರಕಾಯುಧಗಳೊಂದಿಗೆ ಸಂಚರಿಸುತ್ತಿದ್ದ ಆರು ಮಂದಿಯನ್ನು ಕಾಪು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶನಿವಾರ ಸಂಜೆ ವೇಳೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಮುಲ್ಕಿಯ ಅಮಿತ್ ರಾಜ್, ಕಾಟಿಪಳ್ಳದ ಪ್ರಕಾಶ್, ವಾಮಂಜೂರು ನೀರುಮಾರ್ಗದ ವರುಣ್, ಸುರತ್ಕಲ್ ನ ಕಾರ್ತಿಕ್ ಶೆಟ್ಟಿ, ಕಾಟಿಪಳ್ಳದ ಅಭಿಷೇಕ್, ಫರಂಗಿಪೇಟೆಯ ಶ್ರೀಕಾಂತ್ ಶ್ರೀಪತಿ ಬಂಧಿತರು. ಬಂಧಿತರಿಂದ ಕಾರು, ಮಾರಕಾಯುಧಗಳು ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರಲ್ಲಿ ಅಭಿಷೇಕ್ ಎಂಬಾತ ಸುರತ್ಕಲ್‌ನಲ್ಲಿ ಕೊಲೆಯಾದ ಫಾಝಿಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು.

- Advertisement -

ಉದ್ಯಾವರದ ಬಳಿ ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಮಾರಕಾಸ್ತ್ರಗಳೊಂದಿಗೆ ಇವರು ಹೋಗುತ್ತಿದ್ದ ಬಗ್ಗೆ ಅನುಮಾನಗೊಂಡ ಕಾಪು ಪೊಲೀಸ್ ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ ಕಾರನ್ನು ನಿಲ್ಲಿಸದೆ ಕಾಪು ಕಡೆ ಪರಾರಿ ಯಾಗಿದ್ದಾರೆ. ಬಳಿಕ ಈ ಬಗ್ಗೆ ಕಾಪು ಠಾಣೆಗೆ ಮಾಹಿತಿ ನೀಡಿದ ಜಯಶ್ರೀ ಮಾನೆ, ಆರೋಪಿಗಳ ವಾಹನವನ್ನು ಬೆನ್ನಟ್ಟಿದ್ದಾರೆ.

ಇನ್ನೊಂದು ವಾಹನದಲ್ಲಿ ಕಾಪು ಠಾಣೆಯ ಎಸ್ ಐ ಅಬ್ದುಲ್ ಆರೋಪಿಗಳ ವಾಹನವನ್ನು ಬೆನ್ನಟ್ಟಿದ್ದಾರೆ. ಕೊನೆಗೆ ಕಾಪುವಿನ ಕೋತಲ್ ಕಟ್ಟೆ ಬಳಿ ಆರೋಪಿಗಳ ವಾಹನವನ್ನು ತಡೆದು ನಿಲ್ಲಿಸಿದ್ದಾರೆ‌.

ವಾಹನವನ್ನು ತಪಾಸಣೆ ಮಾಡಿದ ಪೊಲೀಸರಿಗೆ ಅದರೊಳಗೆ ಮಾರಕಾಯುಧಗಳು ಹಾಗೂ ಇತರ ವಸ್ತುಗಳು ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.



Join Whatsapp