ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ಕುಳಿತ್ತಿದ್ದವರ ಮೇಲೆ ಹರಿದ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ಮೃತ

Prasthutha|

ಉತ್ತರ ಪ್ರದೇಶ: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ಕುಳಿತ್ತಿದ್ದವರ ಮೇಲೆ ಪಿಕಪ್ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಕೊತ್ವಾಲಿ ಬಿಸೌಲಿ ಪ್ರದೇಶದ ಪೈಗಂ ಭಿಕಂಪುರ ಗ್ರಾಮದಲ್ಲಿ ನಡೆದಿದೆ.

- Advertisement -

ರಾಮ್ ಸಿಂಗ್ ಅವರ ಪುತ್ರ ಪ್ರಕಾಶ್ (42), ಮೋಹನ್ ಲಾಲ್ ಅವರ ಪುತ್ರ ಬ್ರಹ್ಮಪಾಲ್ (35), ಶ್ಯಾಮಲಾಲ್ ಅವರ ಪುತ್ರ ಧನಪಾಲ್ (55), ಶ್ಯಾಮಲಾಲ್ ಅವರ ಪುತ್ರ ಜ್ಞಾನ್ ಸಿಂಗ್ (40) ಮೃತಪಟ್ಟವರು.

ತೀವ್ರ ಬಿಸಿಲಿನಿಂದಾಗಿ ಸುಮಾರು 6 ಜನರು ಪೀಪಲ್ ಮರದ ಕೆಳಗೆ ನಿರ್ಮಿಸಲಾಗಿದ್ದ ಟೆಂಟ್‍ನಲ್ಲಿ ಕುಳಿತುಕೊಂಡಿದ್ದರು. ಈ ವೇಳೆ ಅನಿಯಂತ್ರಿತ ಪಿಕಪ್ ವಾಹನ ಹರಿದಿದೆ. ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



Join Whatsapp