ನಮ್ಮದು ಜಾತ್ಯಾತೀತ ಪಕ್ಷ, ಬಿಜೆಪಿಯನ್ನು ವಿರೋಧಿಸುತ್ತಿರುವ ಎಲ್ಲಾ ಪಕ್ಷಗಳ ಮುಖಂಡರು ಮೋದಿಗಿಂತ ಸಮರ್ಥರು: ನಾಯ್ಡು ವೀಡಿಯೊ ವೈರಲ್

Prasthutha|

ಅಮರಾವತಿ: ‘ಭಾರತ ಒಂದು ಅದ್ಭುತ ರಾಷ್ಟ್ರ. ನಮ್ಮದು ಜಾತ್ಯಾತೀತ ಪಕ್ಷ. ಬಿಜೆಪಿಯನ್ನು ವಿರೋಧಿಸುತ್ತಿರುವ ಎಲ್ಲಾ ಪಕ್ಷಗಳ ಮುಖಂಡರು ಮೋದಿಗಿಂತ ಸಮರ್ಥರು ಎಂಬ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಎನ್.ಚಂದ್ರಬಾಬು ನಾಯ್ಡು ಅವರ ಹೇಳಿಕೆಯುಳ್ಳ ವಿಡಿಯೊಂದು ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

- Advertisement -


ವರ್ಷದ ಹಿಂದೆ ಮಾಧ್ಯಮಗಳಿಗೆ ನೀಡಿದ್ದ ಸಂದರ್ಶನದಲ್ಲಿ ನಾಯ್ಡು ಅವರು ಕೇಂದ್ರದಲ್ಲಿದ್ದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ‘ಒಂದು ಕಾಲದಲ್ಲಿ ಸೃಷ್ಟಿಯಾಗಿದ್ದ ರಾಜಕೀಯ ಒತ್ತಡದಿಂದಾಗಿ ನಾವು ಬಿಜೆಪಿ ಸೇರಿದ್ದೆವು. ಆದರೆ ದೇಶದಲ್ಲಿ ಇಂದು ಪ್ರಜಾಪ್ರಭುತ್ವಕ್ಕೇ ಒತ್ತಡ ಸೃಷ್ಟಿಯಾಗಿದೆ. ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳ ಮೂಲತತ್ವವನ್ನೇ ನಾಶ ಮಾಡಲಾಗಿದೆ’ ಎಂದು ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತನಿಖಾ ಸಂಸ್ಥೆಗಳನ್ನು ಸರ್ಕಾರ ತನ್ನ ಕೈವಶ ಮಾಡಿಕೊಂಡು ಸರ್ವನಾಶ ಮಾಡುತ್ತಿದೆ ಎಂದು ಆ ಸಂದರ್ಶನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವಿಡಿಯೊ ಈಗ ಚರ್ಚೆಯಲ್ಲಿದೆ. 2024ರ ಚುನಾವಣೆ ಫಲಿತಾಂಶದ ನಂತರ ತಾವು ಎನ್ಡಿಎ ಜತೆಗೇ ಇರುವುದಾಗಿ ನಾಯ್ಡು ಸ್ಪಷ್ಟಪಡಿಸಿದ್ದಾರೆ.



Join Whatsapp