ನಮ್ಮಪ್ಪ ಕರುಣಾನಿಧಿ ಅಲ್ಲ, ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು: ಅಣ್ಣಾಮಲೈ

Prasthutha|

ಚೆನ್ನೈ: ನಮ್ಮಪ್ಪ ಕುಪ್ಪುಸ್ವಾಮಿ, ಕರುಣಾನಿಧಿ ಅಲ್ಲ. ನಾವು ಗೆಲ್ಲೋಕೆ ಸ್ವಲ್ಪ ಟೈಮ್ ಬೇಕು ಎಂದು ತಮಿಳುನಾಡಿನಲ್ಲಿ ಪಕ್ಷದ ಸೋಲಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪ್ರತಿಕ್ರಿಯಿಸಿದ್ದಾರೆ.

- Advertisement -

ನಾನು ಕರುಣಾನಿಧಿ ಮಗನಾಗಿದ್ದರೆ ಚುನಾವಣೆಯಲ್ಲಿ ಗೆದ್ದು ಬಿಡುತ್ತಿದ್ದೆ. ಹಾಗಾಗಿ ನಾನು ಗೆಲ್ಲಲು ಸಮಯ ಹಿಡಿಯುತ್ತೆ. ನನ್ನಂತವರು ಒಂದೊಂದೇ ಮೆಟ್ಟಿಲು ಹತ್ತಿ ಗೆಲುವನ್ನು ಕಾಣಬೇಕಾಗುತ್ತದೆ. ನನ್ನ ತಂದೆ ಕುಪ್ಪಾಸ್ವಾಮಿ ನನಗೆ ಅದನ್ನೇ ಹೇಳಿಕೊಟ್ಟಿದ್ದಾರೆ. ನಿಧಾನಕ್ಕೆ ಹೋಗು, ಒಂದೊಂದೇ ಮೆಟ್ಟಿಲು ಹತ್ತು, ನ್ಯಾಯವಾದ ದಾರಿಯಲ್ಲಿ ನಡಿ ಎಂದು ಹೇಳಿಕೊಟ್ಟಿದ್ದಾರೆ ಎಂದು ಅಣ್ಣಾಮಲೈ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಅನುಭವಿಸಿದ ನಷ್ಟವನ್ನು ರಾಜ್ಯ ಘಟಕವು ಆತ್ಮಾವಲೋಕನ ಮಾಡಿಕೊಳ್ಳುತ್ತದೆ ಎಂದು ಹೇಳಿದರು. ಅಣ್ಣಾಮಲೈ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಡಿಎಂಕೆಯ ಗಣಪತಿ ಪಿ. ರಾಜ್‌ಕುಮಾರ್ ವಿರುದ್ಧ ಸೋತಿದ್ದಾರೆ.



Join Whatsapp