ಅಗ್ನಿಪಥ್ ಯೋಜನೆ ಬಗ್ಗೆ ಮರುಪರಿಶೀಲನೆ ಮಾಡಿ: ಜೆಡಿಯು ನಾಯಕ ಕೆ.ಸಿ.ತ್ಯಾಗಿ

Prasthutha|

ಬಿಹಾರ: ಪ್ರಧಾನಿ ನರೇಂದ್ರ ಮೋದಿ ಅವರು ಜೂ.7 ಅಥವಾ 8ರಂದು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಎನ್ ಡಿಎ ಸರ್ಕಾರ ರಚನೆಗೆ ನೀತಿಶ್ ಕುಮಾರ್ ಮತ್ತು ಚಂದ್ರ ಬಾಬು ನಾಯ್ಡು ಅವರು ಕೂಡ ಬೆಂಬಲ ನೀಡಿದ್ದಾರೆ. ಇದೀಗ ಇದರ ನಡುವೆ ಜೆಡಿಯು ನಾಯಕರೊಬ್ಬರು ಒಂದು ಅಪಸ್ವರವನ್ನು ಎತ್ತಿದೆ.

- Advertisement -

2022ರಲ್ಲಿ ಮೋದಿ ಸರ್ಕಾರ ಪರಿಚಯ ಮಾಡಿದ ಅಗ್ನಿವೀರ್ ಯೋಜನೆಯನ್ನು ಮರುಪರಿಶೀಲನೆ ಮಾಡಬೇಕು ಎಂದು ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಹೇಳಿದ್ದಾರೆ.


ಅಗ್ನಿಪಥ ಯೋಜನೆ ವಿರುದ್ಧ ಅಸಮಾಧಾನವಿದ್ದು, ಚುನಾವಣೆ ಸಂದರ್ಭದಲ್ಲಿ ಅದು ಗೊತ್ತಾಗಿದೆ. ಹಾಗಾಗಿ ಅಗ್ನಿಪಥ ಯೋಜನೆ ಬಗ್ಗೆ ಪರಾಮರ್ಶೆ ನಡೆಸುವ ಅಗತ್ಯವಿದೆ. ಯೋಜನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಅದರ ಪರಿಣಾಮ ಚುನಾವಣೆಯಲ್ಲೂ ಕಂಡುಬಂದಿದೆ ಎಂದು ಹೇಳಿದ್ದಾರೆ.



Join Whatsapp