ಹೊಳೆನರಸೀಪುರ: ಪ್ರಜ್ವಲ್ ನಿವಾಸದಲ್ಲಿ ಎಸ್ ಐಟಿಯಿಂದ ಸ್ಥಳ ಮಹಜರು

Prasthutha|

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ ಐಟಿ ಅಧಿಕಾರಿಗಳು ಅವರ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ. ಈ ಮೂಲಕ 43 ದಿನಗಳ ಬಳಿಕ ಹೊಳೆನರಸೀಪುರಕ್ಕೆ ಪ್ರಜ್ವಲ್ ಆಗಮನವಾಗಿದೆ.

- Advertisement -

ಡಿವೈಎಸ್ ಪಿ ಸತ್ಯನಾರಾಯಣ ನೇತೃತ್ವದಲ್ಲಿ ಕ್ಯೂಆರ್ ಟಿ ವಾಹನದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಮಾಧ್ಯಮಗಳ ಕ್ಯಾಮೆರಾಗಳಿಗೆ ಕಾಣದಂತೆ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಎಸ್ ಐಟಿ ಅಧಿಕಾರಿಗಳೊಂದಿಗೆ ಎಫ್ ಎಸ್ ಎಲ್ ಅಧಿಕಾರಿಗಳು ಸಹ ಮಾಹಿತಿ ಕಲೆಹಾಕುತ್ತಿದ್ದಾರೆ.



Join Whatsapp