ತೈಲ ದರ ಏರಿಕೆ ಖಂಡಿಸಿ ಸೈಕಲ್ ಜಾಥಾ: ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ವಶಕ್ಕೆ

Prasthutha|

ಬೆಂಗಳೂರು: ತೈಲ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ರಸ್ತೆಗಿಳಿದಿದ್ದಾರೆ. ಇಂದು ನಗರದ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ನಾಯಕರು ಸೈಕಲ್ ಜಾಥಾ ನಡೆಸಿದ್ದು, ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಶಾಸಕರಾದ ಅಶ್ವಥ್ ನಾರಾಯಣ್, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ.

ಇಂದು ಬೆಳಗ್ಗೆ 9:30 ಕ್ಕೆ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ಸೈಕಲ್ ಜಾಥಾ ಆರಂಭಿಸಲಾಯಿತು. ವಿಜಯೇಂದ್ರ ನೇತೃತ್ವದಲ್ಲಿ ಸೈಕಲ್ ಏರಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಾಯಕರು ಮುಂದಾದರು. ಆದರೆ ಬಿಜೆಪಿ ಕಚೇರಿ ಮುಂಭಾಗದಲ್ಲೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.



Join Whatsapp