ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Prasthutha|

ಬೆಂಗಳೂರು: ರಾಜ್ಯ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷ ನಾಯಕನ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಹೈಕಮಾಂಡ್ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಬದಲಾವಣೆ ಮಾಡಿದೆ.

- Advertisement -

ಈ ಮೊದಲು ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದ ಅರುಣ್​ ಸಿಂಗ್​ ಅವರಿದ್ದು, ಇದೀಗ ರಾಜ್ಯ ಉಸ್ತುವಾರಿಯನ್ನ ಬದಲಾವಣೆ ಮಾಡುವ ಮೂಲಕ ಅರುಣ್‌ ಸಿಂಗ್‌ ಗೆ ಕೊಕ್ ನೀಡಲಾಗಿದೆ.

ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನ ರಾಜ್ಯ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದು, ಇನ್ನು ಸುಧಾಕರ್ ರೆಡ್ಡಿ ಅವರನ್ನು ಸಹ ಉಸ್ತುವಾರಿಯನ್ನಾಗಿ ಬಿಜೆಪಿ ಹೈಕಮಾಂಡ್ ನೇಮಿಸಲಾಗಿದೆ.



Join Whatsapp