ಭಾರತ್ ರೈಸ್ ಮಾರಾಟ ನಿಲ್ಲಿಸಿದ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ರಾಜ್ಯಕ್ಕೆ ಎಂಆರ್ ಪಿ ದರದಲ್ಲಿ 29 ರೂ.ಗೆ ಕೆಜಿ ಭಾರತ್ ಅಕ್ಕಿ ಮಾರಾಟವನ್ನು ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

- Advertisement -


ಇಂದು ವಿಧಾನಸೌಧದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಭಾರತ್ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದರ ವಿರುದ್ಧ ನಾವು ಪ್ರತಿಭಟನೆ ಪ್ರಾರಂಭಿಸುತ್ತೇವೆ. ಅವರ ಬಳಿ ಅಕ್ಕಿ ದಾಸ್ತಾನು ಇದ್ದರೂ ಅಕ್ಕಿ ನೀಡುತ್ತಿಲ್ಲ ಎಂದರೆ ಅದು ರಾಜಕೀಯ ಎಂದು ತಿರುಗೇಟು ನೀಡಿದ್ದಾರೆ.
ಚುನಾವಣೆ ಉದ್ದೇಶದಿಂದ ಭಾರತ್ ಅಕ್ಕಿಯ ಮಾರಾಟ ಮಾಡಲಾಯಿತು. ಚುನಾವಣೆ ಮುಗಿದ ಮೇಲೆ ಅದನ್ನು ನಿಲ್ಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.



Join Whatsapp