ಬಿಹಾರದಲ್ಲಿ ಭಾರಿ ಮಳೆ: ಸಿಡಿಲು ಬಡಿದು 9 ಮಂದಿ ಸಾವು

Prasthutha|

ಪಟ್ನಾ: ಕಳೆದ 24 ಗಂಟೆಗಳಲ್ಲಿ ಬಿಹಾರದ ಆರು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಜೆಹಾನಾಬಾದ್ ಜಿಲ್ಲೆಯಲ್ಲಿ ಮೂವರು, ಮಾಧೇಪುರ ಜಿಲ್ಲೆಯಲ್ಲಿ ಇಬ್ಬರು, ಪೂರ್ವ ಚಂಪಾರಣ್, ರೋಹ್ತಾಸ್, ಸರನ್ ಮತ್ತು ಸುಪೌಲ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.


ಘಟನೆ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.



Join Whatsapp