ಎಲ್‌ಕೆ ಅಡ್ವಾಣಿ ಬದುಕಿರುವಾಗಲೇ ಶ್ರದ್ಧಾಂಜಲಿ ಅರ್ಪಿಸಿದ ವಿ. ಸೋಮಣ್ಣ

Prasthutha|

ತುಮಕೂರು: ಬದುಕಿರುವ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೆ ಕೇಂದ್ರ ಸಚಿವ ವಿ. ಸಚಿವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಅರ್ಪಿಸಿದ ಯಡವಟ್ಟು ಘಟನೆ ನಡೆದೆ.

- Advertisement -

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಹೊರವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಕಾರ್ಯಕರ್ತರ ಸಭೆಯಲ್ಲಿ ಸೋಮಣ್ಣ ಈ ಯಡವಟ್ಟು ಮಾಡಿಕೊಂಡಿದ್ದಾರೆ. ಸಮಾರಂಭದಲ್ಲಿ ಮುಖ್ಯ ಸೋಮಣ್ಣ ಅತಿಥಿಯಾಗಿ ಭಾಗವಹಿಸಿದ್ದರು.

ವಯೋ ಸಹಜ ಅನಾರೋಗ್ಯದಲ್ಲಿರುವ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿಯವರನ್ನು ನಿಧನರಾಗಿದ್ದಾರೆಂದು ತಿಳಿಸಿದ ಕೇಂದ್ರ ಸಚಿವ ಸೋಮಣ್ಣ ಶ್ರದ್ಧಾಂಜಲಿಯನ್ನೂ ಅರ್ಪಿಸಿದ್ದಾರೆ.

- Advertisement -

ಮಾಜಿ ಉಪ ಪ್ರಧಾನಿ ಅಡ್ವಾಣಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ವಿ.ಸೋಮಣ್ಣ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿಯೇ ಬದುಕಿರುವ ಅಡ್ವಾಣಿಯವರನ್ನು ನಿಧನರಾಗಿದ್ದಾರೆಂದು ತಿಳಿಸಿದ್ದಾರೆ.



Join Whatsapp