ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ​ಖಂಡ್ರೆ ಖಡಕ್​ ಸೂಚನೆ

Prasthutha|

ಬೆಂಗಳೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳು ಗ್ರಾಮದಲ್ಲಿ ಚಿರತೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯ ಸಂಪೂರ್ಣ ವರದಿ ನೀಡುವಂತೆ ಸಚಿವ ಈಶ್ವರ್​ ಖಂಡ್ರೆ ಅರಣ್ಯ ಇಲಾಖೆ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.

- Advertisement -

ಅರಣ್ಯ ಸಿಬ್ಬಂದಿ ಸಮ್ಮುಖದಲ್ಲೇ ಸಾರ್ವಜನಿಕರು ಚಿರತೆ ಕೊಂದಿದ್ದಾರೆ. ಚಿರತೆ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯುಂಟು ಚಿರತೆಯನ್ನು ಸೆರೆಹಿಡಿಯಲು ಹಾಗೂ ಚಿರತೆಯ ಹತ್ಯೆ ತಡೆಯಲು ವಿಫಲವಾದ ಕುರಿತು ಶೀಘ್ರವಾಗಿ ಇಲಾಖೆ ವತಿಯಿಂದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಶೀಘ್ರವಾಗಿ ವರದಿ ಸಲ್ಲಿಸುವಂತೆ ಹೇಳಿದ್ದಾರೆ.



Join Whatsapp