ನಟ ರಕ್ಷಿತ್ ಶೆಟ್ಟಿ ವಿರುದ್ಧ FIR

Prasthutha|

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

- Advertisement -


ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್ ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದಾರೆ. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ ಹಾಡು’ ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.


ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಬಳಕೆ ಆದ ‘ಗಾಳಿ ಮಾತು’ ಮತ್ತು ‘ನ್ಯಾಯ ಎಲ್ಲಿದೆ’ ಚಿತ್ರದ ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ. ಹಕ್ಕುಸ್ವಾಮ್ಯ ಹಾಗೂ ಪ್ರಸಾರದ ಹಕ್ಕನ್ನ ಖರೀದಿ ಮಾಡದೇ ಹಾಡುಗಳ ಬಳಕೆಯಾಗಿದೆ ಎಂದು ನವೀನ್ ಕುಮಾರ್ ಆರೋಪಿಸಿದ್ದಾರೆ.



Join Whatsapp