ದಲಿತರ ಪರ ಇದ್ದೇವೆ ಎಂದು ಅವರ ಹಣವನ್ನೇ ಕಾಂಗ್ರೆಸ್ ಲೂಟಿ ಮಾಡಿದೆ: ಆರ್.ಅಶೋಕ್

Prasthutha|

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ ಇದ್ದೇವೆ ಅಂತಾ ಹೇಳಿ ಅವರ ಹಣ ಕಾಂಗ್ರೆಸ್ ಲೂಟಿ ಮಾಡಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

- Advertisement -


ಕಾಂಗ್ರೆಸ್ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೋಡಬೇಕು. ಸದನದ ಒಳಗೂ ಹೋರಾಟ ಮಾಡುತ್ತೇವೆ. ಸಿಎಂ ಬಚಾವ್ ಆಗುವುದಕ್ಕೆ ನಿವೃತ್ತ ಜಡ್ಜ್ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ. ಸಿಎಂ ಬಚಾವ್ ಆಗೋಕೆ ನಿವೃತ್ತ ಜಡ್ಜ್ ಮುಖಾಂತರ ಇವರ ಮೇಲೆ ಆರೋಪ ಬಂದ್ರೆ ನ್ಯಾಯಂಗ ತನಿಖೆ ಆಗಬೇಕು. ಮುಡಾ ಕೇಸ್ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದರು.



Join Whatsapp