ನಂತೂರು, ಕೆಪಿಟಿಯಲ್ಲಿ ಹದಗೆಟ್ಟಿರುವ ಹೆದ್ದಾರಿ: ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Prasthutha|

ಮಂಗಳೂರು: ನಂತೂರು ಹಾಗೂ ಕೆಪಿಟಿ ಜಂಕ್ಷನ್ ನಲ್ಲಿ ಹೆದ್ದಾರಿ ಹದಗೆಟ್ಟಿದ್ದು, ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇತರ ಅಧಿಕಾರಿಗಳೊಂದಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -


ಬಳಿಕ ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಭಾರೀ ಮಳೆಯಿಂದಾಗಿ ಕೆಪಿಟಿ ಮತ್ತು ನಂತೂರಿನಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ನಂತೂರು ಹಾಗೂ ಕೆಪಿಟಿಯಲ್ಲಿ ಪೇವರ್ ಬ್ಲಾಕ್ಸ್ ಗಳನ್ನು ಅಳವಡಿಸಿ ತಾತ್ಕಾಲಿಕ ಪರಿಹಾರ ಒದಗಿಸುವಂತೆ ಎನ್ಎಚ್ಎಐ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.



Join Whatsapp