ಬಿರುಗಾಳಿ ಮಳೆ ಹಾನಿ : ಪರಿಹಾರ ಕಾರ್ಯದಲ್ಲಿ ತೊಡಗಿದ ಮಾಜಿ ಶಾಸಕ ಮೊಯ್ದಿನ್ ಬಾವ

Prasthutha|

ಮಂಗಳೂರು : ಸುರತ್ಕಲ್ ಚೊಕ್ಕಬೆಟ್ಟು ಪ್ರದೇಶದಲ್ಲಿ ನಿನ್ನೆ ಬೀಸಿದ ಬಾರಿ ಗಾಳಿ ಮಳೆಗೆ ಸುಮಾರು 25ಕ್ಕೂ ಹೆಚ್ಚು ವಾಸದ ಮನೆಗಳಿಗೆ ಹಾನಿಯಾಗಿದೆ. ಸರಕಾರಿ ಶಾಲೆಯ ಹಂಚುಗಳು ಬಿದ್ದು ಓರ್ವ ವಿದ್ಯಾರ್ಥಿ ತಲೆಗೆ ಗಾಯವಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ ಮಾಜಿ ಶಾಸಕ ಮೊಯ್ದಿನ್ ಬಾವ ಪರಿಹಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಹಾನಿಗೊಳಗಾದ ಮನೆಗಳು ಮತ್ತು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಸಂತ್ರಸ್ತರಿಗೆ ಧೈರ್ಯ ತುಂಬಿದರು.

- Advertisement -

ಜಿಲ್ಲಾಧಿಕಾರಿ ಮತ್ತು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳನ್ನು ಫೋನ್ ಮುಖಾಂತರ ಸಂಪರ್ಕಿಸಿ ಘಟನೆಯ ವಿವರವನ್ನು ನೀಡಿದರು. ಸಂತ್ರಸ್ತರಿಗೆ ಸಹಾಯ ಮಾಡಿ ಶೀಘ್ರ ಪರಿಹಾರ ಒದಗಿಸುವಂತೆ ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಾಜಿ ಶಾಸಕ ಮೊಯ್ದಿನ್ ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Join Whatsapp