ಪುನೀತ್ ಕೆರೆಹಳ್ಳಿಯಂತಹ ಕಮ್ಯುನಲ್ ಗೂಂಡಾನನ್ನು ಮಟ್ಟ ಹಾಕಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲವೇ?: ಅಬ್ದುಲ್ ಮಜೀದ್

Prasthutha|

ಬೆಂಗಳೂರು: ಇದ್ರೀಷ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕಾನೂನಾತ್ಮಕವಾಗಿ ಪರವಾನಗಿ ಪಡೆದು ಕುರಿ ಮಾಂಸವನ್ನು ವ್ಯಾಪಾರ ಮಾಡುತ್ತಿರುವ ಅಬ್ದುಲ್ ರಝಾಕ್ ಮತ್ತು ತಂಡದ ಮೇಲೆ ಹಲ್ಲೆ ನಡೆಸಲು ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿಲು ಮತ್ತು ಕುರಿಮಾಂಸವನ್ನು ನಾಯಿಮಾಂಸ ಎಂದು ಅಪಪ್ರಚಾರ ಮಾಡಲು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಮಾಡಿಕೊಟ್ಟವರಾರು? ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಶ್ನಿಸಿದ್ದಾರೆ.

- Advertisement -

ಕಳೆದ ಹಲವು ವರ್ಷಗಳಿಂದ ಜಾನುವಾರು ವ್ಯಾಪಾರದಲ್ಲಿ ತೊಡಗಿರುವ ಮುಸ್ಲಿಂ ಮತ್ತು ದಲಿತರ ಮೇಲೆ ಹಲ್ಲೆ ಮಾಡುವುದು, ಕೊಲೆ ಮಾಡುವುದು ಮತ್ತು ಸುಲಿಗೆ ಮಾಡುವ ಪುನೀತ್ ಕೆರೆಹಳ್ಳಿಯನಂತಹ ಕಮ್ಯುನಲ್ ಗೂಂಡಾನನ್ನು ಮಟ್ಟ ಹಾಕಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲವೇ? ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಪ್ರಶ್ನಿಸಿದ್ದಾರೆ.

ಆದಷ್ಟು ಬೇಗ ಇವನನ್ನು ಗಡಿಪಾರು ಮಾಡಲು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಮಂತ್ರಿ ಜಿ. ಪರಮೇಶ್ವರ್ ಅರವರಲ್ಲಿ ಆಗ್ರಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.



Join Whatsapp