ವಯನಾಡ್ ದುರಂತ | ಮಣ್ಣಿನಡಿ ಸಿಲುಕಿ ಸಹಾಯಕ್ಕೆ ಅಂಗಲಾಚಿದ ವ್ಯಕ್ತಿ: ಹೃದಯ ವಿದ್ರಾವಕ ವಿಡಿಯೋ ವೈರಲ್

Prasthutha|

ವಯನಾಡ್ : ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭಾರಿ ಮಳೆ ಹಾಗೂ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 84ಕ್ಕೂ ಅಧಿಕ ಎಂದು ತಿಳಿದು ಬಂದಿದೆ.

- Advertisement -

ವ್ಯಕ್ತಿಯೊಬ್ಬರು ಮಣ್ಣಿನಡಿ ಸಿಲುಕಿಕೊಂಡಿದ್ದು, ಬೃಹತ್ ಬಂಡೆ ಹಿಡಿದುಕೊಂಡು ಸಹಾಯಕ್ಕಾಗಿ ಅಂಗಲಾಚಿದ ಹೃದಯ ವಿದ್ರಾವಕ ವೀಡಿಯೊ ವೈರಲ್ ಆಗಿದೆ.
ಭೂಕುಸಿತದಲ್ಲಿ ಸಿಲುಕಿರುವ ವ್ಯಕ್ತಿ ಸಹಾಯ ಕೋರಿದ್ದಾರೆ. ಪ್ರವಾಹದ ನೀರಿನಲ್ಲಿ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಆತ ನನ್ನನ್ನು ರಕ್ಷಿಸಿ ಎಂದು ಬೇಡಿಕೊಂಡಿದ್ದಾನೆ. ಈ ಹೃದಯ ವಿದ್ರಾವಕ ವೀಡಿಯೊ ವೈರಲ್ ಆಗಿದೆ.

ನದಿ ಮತ್ತು ಮಣ್ಣಿನಡಿಯಿಂದ ಮೃತದೇಹಗಳನ್ನು ಹೊರ ತೆಗೆಯುವುದು ರಕ್ಷಣಾ ಕಾರ್ಯಕರ್ತರಿಗೆ ಸವಾಲಿನ ಕೆಲಸವಾಗಿದ್ದು, ಸತ್ತವರ ಸಂಖ್ಯೆಯನ್ನು ನಿಖರವಾಗಿ ಹೇಳಲಾಗುತ್ತಿಲ್ಲ ಎಂದು ತಿಳಿಸಿದೆ.

- Advertisement -



Join Whatsapp