ಬಂಟ್ವಾಳ: ನೆರೆಹಾನಿ ಪ್ರದೇಶಕ್ಕೆ ಸಚಿವ ಗುಂಡೂರಾವ್, ರಮಾನಾಥ ರೈ ಭೇಟಿ

Prasthutha|

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ನೆರೆ, ಸಾಕಷ್ಟು ಹಾನಿ ಉಂಟಾಗಿದೆ. ಈ ಹಿನ್ನೆಲೆ ಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -


ಇಂದು ಬೆಳಗ್ಗೆ ಬಂಟ್ವಾಳ ಪ್ರದೇಶದಲ್ಲಿ ಹಾನಿಯಾಗಿದ್ದ ಸ್ಥಳಗಳಿಗೆ ದಿನೇಶ್ ಗುಂಡು ರಾವ್ ಮತ್ತು ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿದರು.


ಗೂಡಿನಬಳಿ, ಪಾಣೆಮಂಗಳೂರು ಅಲಡ್ಕ ಪ್ರದೇಶಕ್ಕೆ ನೀಡಿ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು.

- Advertisement -


ನಮ್ಮ ಕೃಷಿ ಭೂಮಿಗೆ ಹಾನಿ ಆಗಿದೆ. ಮನೆಯೆಲ್ಲಾ ಮುಳುಗಡೆ ಆಗಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡರು.



Join Whatsapp