ಮದುವೆಗೆ ಪೋಷಕರ ವಿರೋಧ: ಪ್ರೇಮಿಗಳಿಬ್ಬರು ಆತ್ಮಹತ್ಯೆ

Prasthutha|

ಬಳ್ಳಾರಿ: ಪ್ರೀತಿಗೆ ತಮ್ಮ ಕುಟುಂಬದವರು ಒಪ್ಪಲಿಲ್ಲ ಎಂದು ನೊಂದುಕೊಂಡು ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿರುಗುಪ್ಪ ನಗರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.

- Advertisement -


ರಾಜ (23) ಹಾಗೂ ಪವಿತ್ರ (20) ಮೃತರು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳು. ಸಿರಗುಪ್ಪದ ಆದೋನಿ ರಸ್ತೆಯ ಜಮೀನೊಂದರಲ್ಲಿ ರಾಜ ಹಾಗೂ ಪವಿತ್ರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರೂ ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp