ನವದಂಪತಿ ಮೃತ್ಯು ಪ್ರಕರಣ: ಮೂರನೇ ವ್ಯಕ್ತಿಯ ಕೈವಾಡವಿದೆ ಎಂದ ಕುಟುಂಬ

Prasthutha|

ಕೋಲಾರ: ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ನವ ವಧು ಹಾಗೂ ವರ ಬಡಿದಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ವಧು ಲಿಖಿತಶ್ರೀ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -


ವಧು ಲಿಖಿತಶ್ರೀಯ ತಾತ ಹಾಗೂ ತಂಗಿ ಮೂರನೇ ವ್ಯಕ್ತಿಯ ಕೈವಾಡದ ಬಗ್ಗೆ ಆರೋಪ ಮಾಡಿದ್ದಾರೆ.


ಇಬ್ಬರೂ ಬಹಳಷ್ಟು ಅನ್ಯೋನ್ಯವಾಗಿದ್ದವರು, ಪ್ರೀತಿಸಿ ಮದುವೆಯಾಗಿದ್ದವರು. ಇಬ್ಬರು ಹೊಡರದಾಡಿಕೊಂಡಿರುವುದು ಅನುಮಾನ. ಯಾರೋ ಮೂರನೇ ವ್ಯಕ್ತಿ ಇದರ ಹಿಂದೆ ಇದ್ದಾರೆ ಎಂದು ನವ ವಧು ವರನ ಸಾವಿನ ಬಗ್ಗೆ ಲಿಖಿತಶ್ರೀ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -


ನಾವು ಮದುವೆಗೆ ಹೋಗಿದ್ದೆವು. ಇಬ್ಬರೂ ತುಂಬಾ ಖುಷಿಯಾಗಿ ಇದ್ದರು. ಅವರು ಹೊಡೆದಾಡಿಕೊಂಡಿರುವುದು ಸುಳ್ಳು. ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ ಇದೆ ಎಂದು ಲಿಖಿತಶ್ರೀ ತಂಗಿ ಅರ್ಚನಾ ಹಾಗೂ ತಾತ ವೆಂಕಟರಮಣಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.


ವಿವಾಹದ ನಂತರ ಕೊಠಡಿಗೆ ತೆರಳಿದ ಜೋಡಿ ಏಕಾಏಕಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.



Join Whatsapp