ವಯನಾಡು ಭೂಕುಸಿತ ಪ್ರದೇಶಕ್ಕೆ ಮೋದಿ ಭೇಟಿ, ಪರಿಶೀಲನೆ: ಸಂತ್ರಸ್ತರಿಗೆ ಸಾಂತ್ವನ

Prasthutha|

ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಿಗೆ ಇಂದು (ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದರು.

- Advertisement -


ಕೇರಳದ ವಯನಾಡ್ ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಭೂಕುಸಿತ ಸಂತ್ರಸ್ತರನ್ನು ಭೇಟಿಯಾದರು. ಪ್ರಧಾನಿಯವರು ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು. ಸಂತ್ರಸ್ತರಿಗೆ ಸಾಂತ್ವನ ಹೇಳಿದ ಪ್ರಧಾನಿ, ಸರ್ಕಾರ ಅವರೊಂದಿಗಿದೆ ಎಂದು ಹೇಳಿದರು.


ಭೂಕುಸಿತದ ವೈಮಾನಿಕ ಸಮೀಕ್ಷೆಯ ಸಂದರ್ಭದಲ್ಲಿ, ಭೂಕುಸಿತಕ್ಕೆ ಕಾರಣವೇನು ಎಂದು ಪ್ರಧಾನಿ ಕೇಳಿದರು ಮತ್ತು ಭೂಕುಸಿತದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾದ ಪುಂಚಿರಿಮಟ್ಟಂ, ಮುಂಡಕ್ಕೈ ಮತ್ತು ಚುರಲ್ಮಲಾಗಳ ಪರಿಸ್ಥಿತಿಯನ್ನು ಸಹ ಪರಿಶೀಲಿಸಿದರು. ಈ ವೇಳೆ ಸಿಎಂ ಪಿ ವಿಜಯನ್ ಕೂಡ ಜೊತೆಗಿದ್ದರು.

- Advertisement -



Join Whatsapp