ಆಗಸ್ಟ್ 21ರವರೆಗೆ ಪೂಜಾ ಬಂಧಿಸಬೇಡಿ: ದೆಹಲಿ ಹೈಕೋರ್ಟ್

Prasthutha|

ನವದೆಹಲಿ: ಹಿಂದುಳಿದ ವರ್ಗದ ಪ್ರಮಾಣಪತ್ರ ಹಾಗೂ ತಾನು ಅಂಗವಿಕಲೆ ಎಂದು ನಕಲಿ ದಾಖಲೆ ಸೃಷ್ಟಿಸಿ ಐಎಎಸ್ ಹುದ್ದೆ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್ ಅವರನ್ನು ಆಗಸ್ಟ್ 21ರವರೆಗೆ ಬಂಧಿಸಬಾರದು ಎಂದು ದೆಹಲಿ ಹೈಕೋರ್ಟ್ ಹೇಳಿದೆ.

- Advertisement -


ಪೂಜಾ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಪೊಲೀಸರು ಹಾಗೂ ಯುಪಿಎಸ್ಸಿಗೆ ನ್ಯಾಯಮೂರ್ತಿ ಸುಬ್ರಮಣಿಯಂ ಪ್ರಸಾದ್ ಅವರು ನೋಟಿಸ್ ನೀಡಿದರು. ‘ಪೂಜಾ ಅವರು ತನಿಖೆಗೆ ಸಹಕರಿಸಬೇಕು’ ಎಂದೂ ಅವರು ಹೇಳಿದರು. ಮುಂದಿನ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಲಾಗಿದೆ.



Join Whatsapp