ಶಿಗ್ಗಾವಿ ಕ್ಷೇತ್ರದಿಂದ ನನ್ನ ಮಗ ಕಾಂತೇಶ್‌ ಸ್ಪರ್ಧಿಸಲ್ಲ: ಈಶ್ವರಪ್ಪ

Prasthutha|

- Advertisement -

ಶಿವಮೊಗ್ಗ: ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿರುವುದರಿಂದ ತೆರವಾಗಿರುವ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಮಗ ಕೆ.ಇ.ಕಾಂತೇಶ್‌ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ಚರಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಬಾರಿ ಟಿಕೆಟ್‌ ಕೊಡುತ್ತೇವೆ ಎಂದು ಬಿಜೆಪಿ ನಾಯಕರು ಮೋಸ ಮಾಡಿದ್ದಾರೆ. ಹಾವೇರಿ ಜನ ಅದನ್ನು ಗಮನಿಸುತ್ತಿದ್ದಾರೆ. ಮೋಸ ಮಾಡಿದವರಿಗೆ ಇವತ್ತಲ್ಲ ನಾಳೆ ದೇವರು ನೋಡಿಕೊಳ್ಳುತ್ತಾನೆ. ನಾವು ಯಾವುದೇ ಕಾರಣಕ್ಕೂ ಶಿಗ್ಗಾಂವಿ ಉಪ ಚುನಾವಣೆಗೆ ಸ್ಪರ್ಧಿಸಲ್ಲ ಎಂದರು.



Join Whatsapp