ಬಿಜೆಪಿಯವರಿಗೆ ಸಿದ್ದರಾಮಯ್ಯ ಕೂದಲು ಸಹ ಅಲುಗಾಡಿಸಲು ಸಾಧ್ಯವಿಲ್ಲ: ಶಾಸಕ ಬಾಲಕೃಷ್ಣ

Prasthutha|

ರಾಮನಗರ: ಬಿಜೆಪಿಯವರಿಗೆ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮಾಗಡಿ ಶಾಸಕ ಹೆಚ್ ಸಿ ಬಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

- Advertisement -


ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರದ ಕುರಿತು ಮಾಗಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ಅಂದುಕೊಂಡಿರಲಿಲ್ಲ. ರಾಜ್ಯ ಕಂಡ ಏಕೈಕ ಅತ್ಯುತ್ತಮ ನಾಯಕ ಸಿದ್ದರಾಮಯ್ಯ. ಅಧಿಕಾರ ಇದ್ದ ಸಂದರ್ಭದಲ್ಲಿ ಕುಟುಂಬದವರನ್ನು ಅಕ್ಕಪಕ್ಕ ಸೇರಿಸದೇ ಆಡಳಿತ ಮಾಡಿದ್ದಾರೆ. ಬಿಜೆಪಿಯವರು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.


ಸಿದ್ದರಾಮಯ್ಯ ಕಾಲದಲ್ಲಿ ಆಗದೇ ಇರುವ ವಿಚಾರವನ್ನು ಅವರ ಹಣೆಗೆ ಕಟ್ಟುವ ಕೆಲಸ ಆಗುತ್ತಿದೆ. ಬಿಜೆಪಿಯವರಿಗೆ ಸಿದ್ದರಾಮಯ್ಯನ ಜನಪ್ರಿಯತೆ ಸಹಿಸಲು ಆಗುತ್ತಿಲ್ಲ. ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದರೂ ನಮ್ಮ ತಟ್ಟೆಯ ನೊಣದ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.



Join Whatsapp