ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷರಾಗಿ ಅಭಿಷೇಕ್ ಮನು ಸಿಂಘ್ವಿ ನೇಮಕ

Prasthutha|

ನವದೆಹಲಿ: ಕಾಂಗ್ರೆಸ್ ತನ್ನ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗವನ್ನು ಶನಿವಾರ ಪುನರ್‌ರಚಿಸಿದೆ. ಕಾನೂನು ವಿಭಾಗದ ಅಧ್ಯಕ್ಷರಾಗಿ ಅಭಿಷೇಕ್ ಮನು ಸಿಂಘ್ವಿ ಅವರನ್ನು ನೇಮಕಗೊಳಿಸಿದೆ‌.

- Advertisement -

ಹಿರಿಯ ವಕೀಲರಾದ ಸಲ್ಮಾನ್ ಖುರ್ಷಿದ್, ಕೆಟಿಎಸ್ ತುಳಸಿ ಮತ್ತು ವಿವೇಕ್ ತನ್ಖಾ ಅವರನ್ನು ಕಾಂಗ್ರೆಸ್ ಕಾನೂನು ವಿಭಾಗವು ಒಳಗೊಂಡಿದೆ.

ಚಲ್ಲಾ ವಂಶಿ ಚಂದ್ ರೆಡ್ಡಿ ಅವರು ಮಹಾರಾಷ್ಟ್ರ, ನವೀನ್ ಶರ್ಮಾ ಅವರನ್ನು ಹರಿಯಾಣ ಮತ್ತು ಗೋಕುಲ್ ಬುಟೇಲ್ ಅವರನ್ನು ಜಮ್ಮು ಮತ್ತು ಕಾಶ್ಮೀರದ ವಾರ್ ರೂಮ್ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.

- Advertisement -

ರಾಷ್ಟ್ರೀಯ ವಾರ್ ರೂಂ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ಮುಂದುವರಿಯಲಿದ್ದಾರೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಎಐಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಆರ್‌ಟಿಐ ವಿಭಾಗವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನರ್‌ರಚಿಸುವ ಪ್ರಸ್ತಾವನೆಗೂ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



Join Whatsapp