ನೀವು ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತೀರಾ: ರಾಹುಲ್‌ಗೆ ಟಿಎಂಸಿ ಪ್ರಶ್ನೆ

Prasthutha|

ಕೋಲ್ಕತ್ತಾ: ನೀವು ಸಿದ್ದರಾಮಯ್ಯನವರ ರಾಜೀನಾಮೆ ಕೇಳುತ್ತೀರಾ ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಕುನಾಲ್‌ ಘೋಷ್‌ ಅವರು ರಾಹುಲ್‌ ಗಾಂಧಿ ಅವರಿಗೆ ಪ್ರಶ್ನೆ ಕೇಳಿದ್ದಾರೆ.

- Advertisement -

ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ಬದಲು ಆರೋಪಿಗಳನ್ನು ರಕ್ಷಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಟಿಎಂಸಿ ತಿರುಗೇಟು ನೀಡಿದೆ.

ರಾಹುಲ್‌ ವಿರುದ್ಧ ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಕುನಾಲ್‌ ಘೋಷ್‌, ರಾಹುಲ್‌ ಗಾಂಧಿ ಅವರೇ ನಿಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜೀನಾಮೆ ನೀಡುವಂತೆ ಹೇಳುತ್ತೀರಾ? ಅವರ ವಿರುದ್ಧ ದೊಡ್ಡ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಸರಿಯಾದ ಮಾಹಿತಿ ಇಲ್ಲದೇ, ಮಮತಾ ಬ್ಯಾನರ್ಜಿ ತೆಗೆದುಕೊಂಡ ಕ್ರಮಗಳನ್ನು ತಿಳಿಯದೇ ನೀವು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಮಾಡಿದ್ದೀರಿ. ಈಗ ನೀವು ನಿಮ್ಮ ಸಿಎಂ ಬಗ್ಗೆ ದಯವಿಟ್ಟು ಕ್ರಮ ಕೈಗೊಳ್ಳುತ್ತೀರಾ ಎಂದು ಪ್ರಶ್ನಿಸಿದ್ದಾರೆ.

- Advertisement -

ರಾಹುಲ್‌ ಹೇಳಿದ್ದೇನು?
ವೈದ್ಯಕೀಯ ಕಾಲೇಜಿನಂತಹ ಸ್ಥಳದಲ್ಲಿ ವೈದ್ಯರು ಸುರಕ್ಷಿತವಾಗಿಲ್ಲದಿದ್ದರೆ, ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಓದಲು ಹೇಗೆ ಹೊರಗೆ ಕಳುಹಿಸುತ್ತಾರೆ? ನಿರ್ಭಯಾ ಪ್ರಕರಣದ ನಂತರ ಮಾಡಿದ ಕಟ್ಟುನಿಟ್ಟಿನ ಕಾನೂನುಗಳು ಇಂತಹ ಅಪರಾಧಗಳನ್ನು ತಡೆಗಟ್ಟುವಲ್ಲಿ ವಿಫಲವಾದವು ಏಕೆ? ಹತ್ರಾಸ್‌ನಿಂದ ಉನ್ನಾವ್‌ವರೆಗೆ ಮತ್ತು ಕಥುವಾದಿಂದ ಕೋಲ್ಕತ್ತಾದವರೆಗೆ ನಿರಂತರವಾಗಿ ಹೆಚ್ಚುತ್ತಿರುವ ಮಹಿಳೆಯರ ವಿರುದ್ಧದ ಘಟನೆಗಳ ಕುರಿತು ಪ್ರತಿ ಪಕ್ಷ, ಸಮಾಜದ ಪ್ರತಿಯೊಂದು ವರ್ಗವು ಗಂಭೀರ ಚರ್ಚೆಗಳನ್ನು ನಡೆಸಬೇಕು ಮತ್ತು ಕಠಿಣವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದರು.

ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದರೆ ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ಆರೋಪಿಯನ್ನು ರಕ್ಷಿಸಲು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತ ಮುಂದಾಗಿದೆ ಎಂದು ಮಮತಾ ಬ್ಯಾನರ್ಜಿ ವಿರುದ್ಧವೇ ರಾಹುಲ್‌ ಕಿಡಿಕಾರಿದ್ದರು.



Join Whatsapp