ಬಲಪಂಥೀಯರೇ ಗಾಂಧಿಯನ್ನು ಕೊಂದು ಹಾಕಿರೋದು: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಬಲಪಂಥೀಯರೇ ಗಾಂಧಿಯನ್ನು ಕೊಂದು ಹಾಕಿರೋದು. ಗಾಂಧಿ ಕೊಂದ ಗೋಡ್ಸೆಯನ್ನು ಪೂಜೆ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

- Advertisement -


21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ ವಿಚಾರ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಾಂಧೀಜಿಯವರ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು ಪ್ರಸ್ತುತತೆ 19-20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಇಂದಿಗೂ ಅದು ಪ್ರಸ್ತುತ. ಗಾಂಧಿಯನ್ನ ಮರೆತರೆ ಇಡೀ ಸಮಾಜವನ್ನೇ ಮರೆತ ಹಾಗೆ, ವಿಶ್ವವನ್ನ ಮರೆತ ಹಾಗೆ. ಗಾಂಧಿ ವಿಚಾರ ಮೆಲುಕು ಹಾಕಬೇಕು. ಆ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡುವುದು ಅವಶ್ಯಕ ಎಂದು ತಿಳಿಸಿದರು.


ಕೋಮು ಸಂಘರ್ಷ ಶುರು ಆಗಿದೆ, ಇದು ಇರಬಾರದು. ಹುಟ್ಟುವಾಗ ಎಲ್ಲ ವಿಶ್ವಮಾನವ, ಬೆಳೆಯುತ್ತ ಅಲ್ಪ ಮಾನವರಾಗುತ್ತಾರೆ ಅಂತಾ ಕುವೆಂಪು ಹೇಳಿದ್ದಾರೆ. ವಿಶ್ವ ಮಾನವ ಆಗೋದು ಕಷ್ಟ. ಆ ದಾರಿಯಲ್ಲಿ ಬೆಳೆಯೋದು ಕಷ್ಟ ಆಗಲ್ಲ. ಅಸಹನೆ ಬೆಳೆಸಿಕೊಳ್ಳುವುದು ಇರಬಾರದು. ಹೊಂದಾಣಿಕೆ, ಸೌಹಾರ್ದತೆಯಿಂದ ಬಾಳಬೇಕು ಎಂದರು.



Join Whatsapp